ಆಸ್ಟ್ರೇಲಿಯಾದಲ್ಲಿ ಭಾರತೀಯ ಆಟಗಾರರಿಗೆ ಬಿಗಿ ಭದ್ರತೆ

ಸೋಮವಾರ, 15 ಡಿಸೆಂಬರ್ 2014 (18:08 IST)
ಸಿಡ್ನಿಯಲ್ಲಿ ಒತ್ತೆಯಾಳುಗಳನ್ನು ಹಿಡಿದಿಟ್ಟಿರುವ ಘಟನೆ ಹಿನ್ನೆಲೆಯಲ್ಲಿ ಬ್ರಿಸ್ಬೇನ್‌ನಲ್ಲಿ ಭಾರತದ ಆಟಗಾರರಿಗೆ ಭದ್ರತೆ ಬಿಗಿಗೊಳಿಸಲಾಗಿದೆ. ಈ ನಡುವೆ ಬಿಸಿಸಿಐ ಅಲ್ಲಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ನಾವು ಕ್ರಿಕೆಟ್ ಆಸ್ಟ್ರೇಲಿಯಾದ ಅಗ್ರ ಬಾಸ್‌ಗಳ ಜೊತೆ ಸಂಪರ್ಕದಲ್ಲಿದ್ದೇವೆ.

ಆಟಗಾರರು ಬ್ರಿಸ್ಬೇನ್‌ನಲ್ಲಿದ್ದು ಅಲ್ಲಿ ಎಲ್ಲವೂ ಸಹಜವಾಗಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಸಂಜಯ್ ಪಟೇಲ್ ಹೇಳಿದ್ದಾರೆ. ಆದಾಗ್ಯೂ, ಭಾರತ ತಂಡದ ಭದ್ರತೆಯನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ .ಭಾರತದ ತಂಡದ ಭದ್ರತೆಗೆ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ನಮಗೆ ಮಾಹಿತಿ ನೀಡಿದೆ ಎಂದು ಅವರು ಹೇಳಿದ್ದಾರೆ.

ಶಸ್ತ್ರಸಜ್ಜಿತ ವ್ಯಕ್ತಿಯೊಬ್ಬ ಸಿಡ್ನಿಯ ಜನಪ್ರಿಯ ಕೆಫೆಯೊಂದರಲ್ಲಿ ಅನೇಕ ಮಂದಿಯನ್ನು ಒತ್ತೆಯಾಗಿ ಇರಿಸಿಕೊಂಡಿದ್ದು, ಇಸ್ಲಾಮಿಕ್ ಧ್ವಜವನ್ನು ಪ್ರದರ್ಶಿಸಿದ್ದಾನೆ.

ವೆಬ್ದುನಿಯಾವನ್ನು ಓದಿ