ಬಿಸಿಸಿಐ ಕೆಂಗಣ್ಣಿಗೆ ಗುರಿಯಾದ ಅನಿಲ್ ಕುಂಬ್ಳೆ

ಶನಿವಾರ, 6 ಮೇ 2017 (11:12 IST)
ಮುಂಬೈ: ಟೀಂ ಇಂಡಿಯಾ ಕೋಚ್ ಅನಿಲ್ ಕುಂಬ್ಳೆ ಚಾಂಪಿಯನ್ಸ್ ಟ್ರೋಫಿ ಟೂರ್ನಮೆಂಟ್ ನಲ್ಲಿ ಆಡಲು ಅವಕಾಶ ನೀಡಿ ಎಂದು ಪತ್ರ ಬರೆದು ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

 
ಐಸಿಸಿ ಮತ್ತು ಬಿಸಿಸಿಐ ನಡುವಿನ ತಿಕ್ಕಾಟದಿಂದಾಗಿ ಟೀಂ ಇಂಡಿಯಾವನ್ನು ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಿಸುವುದಿಲ್ಲ ಎಂದು ಬಿಸಿಸಿಐ ಘೋಷಿಸಿಕೊಂಡಿತ್ತು. ಇದಕ್ಕೆ ಮಾಜಿ ಕ್ರಿಕೆಟಿಗರಾದ ಸಚಿನ್ ತೆಂಡುಲ್ಕರ್ ಮತ್ತು ರಾಹುಲ್ ದ್ರಾವಿಡ್ ಭಾರತ ಪ್ರತಿಷ್ಠಿತ ಟೂರ್ನಿಯಲ್ಲಿ ಆಡಬೇಕಿತ್ತು ಎಂದಿದ್ದರು.

ಇದರ ಬೆನ್ನಲ್ಲೇ ಅನಿಲ್ ಕುಂಬ್ಳೆ ವಿರಾಟ್ ಕೊಹ್ಲಿ ಬಳಗ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಲು ಬಯಸುತ್ತಿದೆ. ಅವಕಾಶ ನೀಡಿ ಎಂದು ಪತ್ರ ಬರೆದಿದ್ದರು ಎನ್ನಲಾಗಿತ್ತು. ಇದು ಬಿಸಿಸಿಐನ ಕೆಲವು ಅಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿದೆ.

‘ಕುಂಬ್ಳೆಗೆ ಈ ವಿಚಾರದಲ್ಲಿ ಮೂಗು ತೂರಿಸುವ ಅಧಿಕಾರವಿಲ್ಲ. ಬಿಸಿಸಿಐ ಈ ಬಗ್ಗೆ ನಿರ್ಧರಿಸಲಿದೆ’ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆಂದು ವರದಿಯಾಗಿದೆ. ಈ ಪತ್ರದ ವಿಚಾರ ಬಿಸಿಸಿಐನ ಸಾಮಾನ್ಯ ಸಭೆಯಲ್ಲಿ ಚರ್ಚೆಯಾಗುವ ಸಂಭವವಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ವೆಬ್ದುನಿಯಾವನ್ನು ಓದಿ