ಆಸ್ಪತ್ರೆಯಲ್ಲಿರುವ ಗಂಗೂಲಿ ಬಗ್ಗೆ ವಿವಾದ ಸೃಷ್ಟಿಸಿದ ಸಿಪಿಐ(ಎಂ) ಪಕ್ಷದ ನಾಯಕ

ಸೋಮವಾರ, 4 ಜನವರಿ 2021 (10:30 IST)
ಕೋಲ್ಕೊತ್ತಾ: ಲಘು ಹೃದಯಾಘಾತದಿಂದಾಗಿ ಆಸ್ಪತ್ರೆ ಸೇರಿರುವ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಬಗ್ಗೆ ಸಿಪಿಐ(ಎಂ) ನಾಯಕರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ಗಂಗೂಲಿಗೆ ರಾಜಕೀಯ ಸೇರುವಂತೆ ಒತ್ತಡ ಹೇರಲಾಗುತ್ತಿತ್ತು. ಅವರ ಜನಪ್ರಿಯತೆಯನ್ನು ರಾಜಕೀಯಕ್ಕೆ ಬಳಸಿಕೊಳ್ಳಲು ಹಲವರು ಒತ್ತಡ ಹೇರುತ್ತಿದ್ದರು. ಬಹುಶಃ ಇದೇ ಕಾರಣಕ್ಕೆ ಅವರಿಗೆ ಒತ್ತಡ ಹೆಚ್ಚಾಗಿ ಹೃದಯಾಘಾತವಾಗಿದೆ ಎಂದು ಸಿಪಿಐ(ಎಂ) ನಾಯಕ ಅಶೋಕ್ ಭಟ್ಟಾಚಾರ್ಯ ಹೇಳಿಕೆ ನೀಡಿದ್ದಾರೆ. ಅವರ ಈ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ