ಮೂರನೇ ಪಂದ್ಯದಲ್ಲಿ ದೇವದತ್ತ್ ಪಡಿಕ್ಕಲ್ ಕಣಕ್ಕೆ ಸಾಧ್ಯ ತೆ

ಗುರುವಾರ, 22 ಜುಲೈ 2021 (12:18 IST)
ಕೊಲೊಂಬೋ: ಶ್ರೀಲಂಕಾ ವಿರುದ್ಧ ಈಗಾಗಲೇ ಏಕದಿನ ಸರಣಿ ಗೆದ್ದಿರುವ ಟೀಂ ಇಂಡಿಯಾಕ್ಕೆ ಈಗ ಕೊನೆಯ ಪಂದ್ಯದಲ್ಲಿ ಬೆಂಚ್ ಸ್ಟ್ರೆಂಗ್ತ್ ಪರೀಕ್ಷಿಸುವ ಕಾಲ.


ಮೂರನೇ ಪಂದ್ಯಕ್ಕೆ ಕನ್ನಡಿಗ ದೇವದತ್ತ್ ಪಡಿಕ್ಕಲ್ ಗೆ ಅವಕಾಶ ಸಿಗುವ ಸಾಧ‍್ಯತೆಯಿದೆ. ಆರಂಭಿಕ ಸ್ಥಾನದಲ್ಲಿ ಮೊದಲೆರಡು ಪಂದ್ಯದಲ್ಲಿ ಪೃಥ್ವಿ ಶಾ ಮತ್ತು ಶಿಖರ್ ಧವನ್ ಕಣಕ್ಕಿಳದಿದ್ದರು.

ಇದೀಗ ಮೂರನೇ ಪಂದ್ಯದಲ್ಲಿ ದೇವದತ್ತ್ ಪಡಿಕ್ಕಲ್ ಗೆ ಅವಕಾಶ ನೀಡುವ ಸಾಧ‍್ಯತೆಯೂ ಇಲ್ಲದಿಲ್ಲ. ಅಲ್ಲದೆ, ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಚೇತರಿಸಿಕೊಂಡರೆ ಅವರೂ ಕಣಕ್ಕಿಳಿಯಬಹುದು. ಅಂತೂ ಮೂರನೇ ಪಂದ್ಯದಲ್ಲಿ ತಂಡದಲ್ಲಿ ಬಹುದೊಡ್ಡ ಬದಲಾವಣೆ ನಿರೀಕ್ಷಿಸಬಹುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ