ಮಾಜಿ ಕ್ರಿಕೆಟಿಗ, ಸಂಸದ ಗೌತಮ್ ಗಂಭೀರ್ ಗೆ ಜೀವ ಬೆದರಿಕೆ

ಭಾನುವಾರ, 22 ಡಿಸೆಂಬರ್ 2019 (09:15 IST)
ನವದೆಹಲಿ: ಮಾಜಿ ಕ್ರಿಕೆಟಿಗ, ದೆಹಲಿ ಬಿಜೆಪಿ ಸಂಸದ ಗೌತಮ್ ಗಂಭೀರ್ ತಮಗೆ ಜೀವ ಬೆದರಿಕೆ ಕರೆ ಬರುತ್ತಿದೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.


ಫೋನ್ ನಲ್ಲಿ ಅನಾಮಿಕ ವ್ಯಕ್ತಿಗಳು ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಗಂಭೀರ್ ದೂರಿನಲ್ಲಿ ಹೇಳಿದ್ದಾರೆ. ನೇರ ನುಡಿಗೆ ಹೆಸರಾಗಿರುವ ಗಂಭೀರ್ ಯಾವುದೇ ವ್ಯಕ್ತಿಯಾಗಿದ್ದರೂ ಹಿಂದೆ ಮುಂದೆ ನೋಡದೇ ಟೀಕೆ ಮಾಡಲು ಹಿಂದೇಟು ಹಾಕುವುದಿಲ್ಲ.

ಶುಕ್ರವಾರದಂದು ತನಗೆ ದೂರವಾಣಿ ಮೂಲಕ ಬೆದರಿಕೆ ಕರೆ ಬಂದಿದೆ. ಹೀಗಾಗಿ ತನಗೆ ಮತ್ತು ಕುಟುಂಬದವರಿಗೆ ಭದ್ರತೆ ಒದಗಿಸಬೇಕೆಂದು ಗಂಭೀರ್ ಪೊಲೀಸರಿಗೆ ಮನವಿ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ