ಐಪಿಎಲ್‌: ಟಾಸ್‌ ಗೆದ್ದ ರಾಜಸ್ಥಾನ ರಾಯಲ್ಸ್‌, ಆರ್‌ಸಿಬಿಯನ್ನು ಬ್ಯಾಟಿಂಗ್‌ಗೆ ಆಹ್ವಾನ

Sampriya

ಶನಿವಾರ, 6 ಏಪ್ರಿಲ್ 2024 (19:41 IST)
Photo Courtesy X
ಜೈಪುರ: ಸವಾಯಿ ಮಾನ್‌ಸಿಂಗ್ ಮೈದಾನದಲ್ಲಿ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಂದು  ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿದೆ.

ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ನಾಯಕ ಸಂಜು ಸ್ಯಾಮ್ಸನ್ ಮೊದಲು ಬೌಲಿಂಗ್ ಆಯ್ದುಕೊಂಡು ಆರ್‌ಸಿಬಿಯನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ 2024ರ ಆವೃತ್ತಿಯ ಆರಂಭಕ್ಕೆ ಮುನ್ನ ಆರ್‌ಸಿಬಿಯ ಹೊಸ ಅಧ್ಯಾಯ ಎಂದು ವಿರಾಟ್ ಕೊಹ್ಲಿ ಘೋಷಿಸಿದ್ದರು. ಆರ್‌ಸಿಬಿ ಆಡಿದ ನಾಲ್ಕು ಪಂದ್ಯಗಳಲ್ಲಿ ಒಂದು ಪಂದ್ಯ ಗೆದ್ದರೆ, ಮೂರು ಪಂದ್ಯಗಳಲ್ಲಿ ಮಕಾಡೆ ಮಲಗಿದೆ. ಆರ್‌ಸಿಬಿ ಸತತ ಸೋಲಿನಿಂದ ಅಭಿಮಾನಿಗಳು ರೊಚ್ಚಿಗೆದ್ದಿದ್ದು, ಭಾರೀ ಟ್ರೋಲ್ ಮಾಡಿದ್ದು.

ಬ್ಯಾಕ್‌ ಟು ಬ್ಯಾಕ್ ಸೋಲಿನಿಂದ ಆರ್‌ಸಿಬಿ ತಂಡಕ್ಕೆ ಇಂದು  ಹಾಗೂ ರಾಜಸ್ಥಾನ ರಾಯಲ್ಸ್ ನಡುವಿನ ಈ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ  ಆತಿಥ್ಯ ವಹಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ