ಆಂಜಿಯೋಪ್ಲಾಸ್ಟಿ ಬಳಿಕ ಚೇತರಿಸಿಕೊಂಡ ಕಪಿಲ್ ದೇವ್

ಶನಿವಾರ, 24 ಅಕ್ಟೋಬರ್ 2020 (09:26 IST)
ಮುಂಬೈ: ಹೃದಯಾಘಾತಕ್ಕೊಳಗಾಗಿದ್ದ ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ.


ಕಪಿಲ್ ದೇವ್ ಗೆ ಹೃದಯಾಘಾತಕ್ಕೊಳಗಾದ ಸುದ್ದಿ ತಿಳಿಯುತ್ತಿದ್ದಂತೇ ವಿರಾಟ್ ಕೊಹ್ಲಿ ಸೇರಿದಂತೆ ಹಾಲಿ-ಮಾಜಿ ಕ್ರಿಕೆಟಿಗರು, ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಚೇತರಿಕೆಗೆ ಪ್ರಾರ್ಥಿಸಿದ್ದಾರೆ. ಚಿಕಿತ್ಸೆ ಬಳಿಕ ಸ್ವತಃ ಕಪಿಲ್ ತಮಗೆ ಶುಭ ಹಾರೈಸಿದವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಅಲ್ಲದೆ, ತಾವೀಗ ಚೇತರಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಗುರುವಾರ ಮಧ‍್ಯರಾತ್ರಿ ಅವರಿಗೆ ಹೃದಯಾಘಾತವಾಗಿತ್ತು. ಸದ್ಯಕ್ಕೆ ದೆಹಲಿಯ ಪೋರ್ಟಿಸ್ ಎಸ್ಕಾರ್ಟ್ ಹಾರ್ಟ್ ಇನ್ಸ್ಟಿಟ್ಯೂಟ್ ಗೆ ದಾಖಲಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ