ಕರ್ನಾಟಕದ ಹೆಮ್ಮೆಪಡುವಂತೆ ಮಾಡುತ್ತೇನೆ: ಕೆಎಲ್ ರಾಹುಲ್ ಶಪಥ

ಮಂಗಳವಾರ, 3 ನವೆಂಬರ್ 2020 (11:33 IST)
ಬೆಂಗಳೂರು: ಕ್ರೀಡಾಪಟುಗಳಿಗೆ ನೀಡಲಾಗುವ ಪ್ರತಿಷ್ಠಿತ ಏಕಲವ್ಯ ಪ್ರಶಸ್ತಿ ಸ್ವೀಕರಿಸಿ ಮಾತನಾಡಿರುವ ಕನ್ನಡಿಗ, ಕ್ರಿಕೆಟಿಗ ಕೆಎಲ್ ರಾಹುಲ್ ಕರ್ನಾಟಕ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.


ಪ್ರಶಸ್ತಿ ಪಡೆದ ಬಳಿಕ ಮಾತನಾಡಿರುವ ರಾಹುಲ್ ‘ಕರ್ನಾಟಕ ಸರ್ಕಾರದಿಂದ ಈ ಪ್ರಶಸ್ತಿ ಸ್ವೀಕರಿಸಲು ಹೆಮ್ಮೆಯೆನಿಸುತ್ತದೆ. ನನ್ನ ಕೋಚ್ ಗಳು, ಸಹ ಕ್ರಿಕೆಟಿಗರು,ಸ್ನೇಹಿತರು ಮತ್ತು ಕುಟುಂಬದ ಬೆಂಬಲವಿಲ್ಲದೇ ಏನನ್ನೂ ಸಾಧಿಸಲಾಗುತ್ತಿರಲಿಲ್ಲ. ನಾನು ಮುಂದೆಯೂ ನಮ್ಮ ರಾಜ್ಯ ಮತ್ತು ದೇಶ ಹೆಮ್ಮೆ ಪಡುವ ಕೆಲಸ ಮಾಡುತ್ತೇನೆ’ ಎಂದು ರಾಹುಲ್ ಹೇಳಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ