ಪಾಕಿಸ್ತಾನದ ಹಿಂದೂ ನಿರಾಶ್ರಿತರಿಗೆ ಸಹಾಯ ಮಾಡಿದ ಕ್ರಿಕೆಟಿಗ ಶಿಖರ್ ಧವನ್

ಭಾನುವಾರ, 5 ಜುಲೈ 2020 (09:55 IST)
ನವದೆಹಲಿ: ಪಾಕಿಸ್ತಾನ ಮೂಲದ ಹಿಂದೂ ನಿರಾಶ್ರಿತರಿಗೆ ಟೀಂ ಇಂಡಿಯಾ ಕ್ರಿಕೆಟಿಗ ಶಿಖರ್ ಧವನ್ ಕ್ರಿಕೆಟ್ ಬ್ಯಾಟ್ ಮತ್ತು ಮತ್ತಿತರ ಜೀವನ ಅವಶ್ಯಕ ಸಹಾಯಕ ಒದಗಿಸುವ ಮೂಲಕ ಸಹಾಯ ಮಾಡಿದ್ದಾರೆ.


ದೆಹಲಿಯಲ್ಲಿ ನೆಲೆಸಿರುವ ನಿರಾಶ್ರಿತರಿಗೆ ಲಾಕ್ ಡೌನ್ ಸಮಯದಲ್ಲಿ ಜೀವನ ಕಷ್ಟವಾಗಿದೆ. ಈ ಹಿನ್ನಲೆಯಲ್ಲಿ ಭಾರತದ ಸ್ಟಾರ್ ಕ್ರಿಕೆಟಿಗ ಅವರ ಸಹಾಯಕ್ಕೆ ಧಾವಿಸಿದ್ದಾರೆ. ಈ ಬಗ್ಗೆ ಟ್ವಿಟರ್ ನಲ್ಲಿ ಬರೆದುಕೊಂಡಿರುವ ಧವನ್ ನನಗೆ ಈ ನಿರಾಶ್ರಿತರಿಗೆ ಸಹಾಯ ಮಾಡಲು ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ