ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿಗೂ ಶಿಖರ್ ಧವನ್ ಇಲ್ಲ?

ಮಂಗಳವಾರ, 10 ಡಿಸೆಂಬರ್ 2019 (10:14 IST)
ನವದೆಹಲಿ: ಗಾಯದ ಸಮಸ್ಯೆಯಿಂದಾಗಿ ವೆಸ್ಟ್ ಇಂಡೀಸ್ ವಿರುದ್ಧ ಟಿ20 ಸರಣಿಯಿಂದ ಹೊರಗುಳಿದಿದ್ದ ಆರಂಭಿಕ ಶಿಖರ್ ಧವನ್ ಇದೀಗ ಏಕದಿನ ಸರಣಿಯಿಂದಲೂ ಹೊರಗುಳಿಯುವ ಸಾಧ್ಯತೆಯಿದೆ.


ದೆಹಲಿ ಪರ ಸೈಯದ್‍ ಮುಷ್ತಾಕ್ ಅಲಿ ಟಿ20 ಟೂರ್ನಿ ಆಡುವಾಗ ಧವನ್ ಗಾಯಕ್ಕೆ ತುತ್ತಾಗಿದ್ದರು. ಅದರಿಂದ ಇನ್ನೂ ಚೇತರಿಸಿಕೊಳ್ಳದ ಕಾರಣ ವಿಂಡೀಸ್ ವಿರುದ್ಧ ಏಕದಿನ ಸರಣಿಯಿಂದಲೂ ಹೊರಗುಳಿಯುವ ಸಾಧ‍್ಯತೆಯಿದೆ.

ಹೀಗಾದಲ್ಲಿ ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಗೆ ಅದೃಷ್ಟ ಖುಲಾಯಿಸಲಿದೆ. ರಾಹುಲ್ ಏಕದಿನ ತಂಡದಲ್ಲೂ ಆರಂಭಿಕರಾಗಿ ಕಣಕ್ಕಿಳಿಯುವ ಅವಕಾಶ ಪಡೆಯಬಹುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ