ನಾಲ್ಕು ವರ್ಷಗಳ ನಂತರ ಕ್ರಿಕೆಟ್ ಕಣದಲ್ಲಿ ಶ್ರೀಶಾಂತ್ ಹಾಜರ್

ಬುಧವಾರ, 16 ಆಗಸ್ಟ್ 2017 (11:18 IST)
ಕೊಚ್ಚಿ: ಮ್ಯಾಚ್ ಫಿಕ್ಸಿಂಗ್ ಕಳಂಕದಿಂದಾಗಿ ತೆರೆ ಮರೆಗೆ ಸರಿದಿದ್ದ ಕ್ರಿಕೆಟಿಗ ಶ್ರೀಶಾಂತ್ ಆರೋಪ ಮುಕ್ತನಾದ ಮೇಲೆ ಇದೇ ಮೊದಲ ಬಾರಿಗೆ ಕ್ರಿಕೆಟ್ ಕಣಕ್ಕೆ ಮರಳಿದ್ದಾರೆ.


 
ಬಿಸಿಸಿಐಗೆ ಕೇರಳ ಹೈಕೋರ್ಟ್ ಶ್ರೀಶಾಂತ್ ಮೇಲಿನ ನಿಷೇಧ  ತೆರವುಗೊಳಿಸಲು ಆದೇಶಿಸಿತ್ತು. ಆದರೆ ಇದಕ್ಕೆ ಬಿಸಿಸಿಐ ಮೀನಾ ಮೇಷ ಎಣಿಸುತ್ತಿದೆ. ಈ ಹಿನ್ನಲೆಯಲ್ಲಿ ಬಿಸಿಸಿಐ ವಿರುದ್ಧ ಬಹಿರಂಗವಾಗಿ ಕಿಡಿಕಾರಿದ್ದ ಶ್ರೀಶಾಂತ್ ನಂತರ ತಮ್ಮ ವರ್ತನೆಗೆ ಕ್ಷಮೆ ಯಾಚಿಸಿದ್ದರು.

ಇದೀಗ ಸ್ವಾತಂತ್ರ್ಯೋತ್ಸವದ ದಿನ ತಮ್ಮ ತವರಲ್ಲಿ ನಡೆದ ಪ್ರದರ್ಶನ ಪಂದ್ಯವೊಂದರಲ್ಲಿ ಕಣಕ್ಕಿಳಿದಿದ್ದಾರೆ. ಮತ್ತೆ ಕ್ರಿಕೆಟ್ ಕಣಕ್ಕೆ ಮರಳಿರುವುದಕ್ಕೆ ಸಂತಸವಾಗಿದೆ ಎಂದು ಶ್ರೀಶಾಂತ್ ಈ ಸಂದರ್ಭದಲ್ಲಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ.. ಮಳೆ ಇಫೆಕ್ಟ್: ಬಿಎಂಟಿಸಿ ಸಿಬ್ಬಂದಿಗೆ ಎರಡು ದಿನ ರಜೆ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ