ಘಟನೆ ಹಿನ್ನೆಲೆ: ಮಹಿಳೆಯೋರ್ವವರು ತಮ್ಮ ಕುಟುಂಬ ವ್ಯಕ್ತಿಯೋರ್ವರನ್ನು ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದರು. ಇದನ್ನು ಕಂಡ ಚಂದ್ರಶೇಖರ ಮಹಿಳೆಯ ಹಿಂದೆ ಬಿದ್ದಿದ್ದಾನೆ. ಅಷ್ಟೇ ಅಲ್ಲದೆ ಇಂದು ಮುಂಜಾನೆ ಆಸ್ಪತ್ರೆಯ ಒಳ ರೋಗಿಗಳ ವಿಭಾಗಕ್ಕೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರ ಎಸಗಲೂ ಮುಂದಾಗಿದ್ದಾನೆ. ಇದನ್ನು ಕಂಡ ಸಾರ್ವಜನಿಕರು ಆರೋಪಿಯನ್ನು ಹಿಡಿದು ಯಗ್ಗಾಮುಗ್ಗಾ ಥಳಿಸಿ ಬಳಿಕ ಪೊಲೀಸರಿಗೊಪ್ಪಿಸಿದ್ದಾರೆ.
ಆರೋಪಿಯನ್ನು ವಶಕ್ಕೆ ಪಡೆದಿರುವ ನಗರದ ವಿದ್ಯಾನಗರ ಪೊಲೀಸ್ ಠಾಣೆಯ ಅಧಿಕಾರಿಗಳು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮಹಿಳೆಯ ಹೇಳಿಕೆ ಪ್ರಕಾರ, ಕಳೆದ ಮೂರು ದಿನಗಳಿಂದಲೂ ಕೂಡ ಮಹಿಳೆಯ ಹಿಂದೆ ಬಿದ್ದು ಕಾಡುತ್ತಿದ್ದ ಎಂದು ತಿಳಿದು ಬಂದಿದೆ.