ಅರ್ಜಿಯ ವಿಚಾರಣೆ ನಡೆಸಿದ ಸೆಷನ್ಸ್ ನ್ಯಾಯಾಲಯದ ಏಕ ಸದಸ್ಯ ಪೀಠ, ಇದು ಹಳೆಯ ಪ್ರಕರಣವಾಗಿದ್ದು, ಜಾಮೀನು ನೀಡಬಹುದಾಗಿದೆ ಎಂದು ತೀರ್ಮಾನಿಸಿ ಜಾಮೀನು ಮಂಜೂರು ಮಾಡಿದೆ. ಈ ವೇಳೆ ಸರ್ಕಾರಿ ಪರ ವಾದ ಮಂಡಿಸಿದ ಎಸ್ಪಿಪಿ ಪೊನ್ನಣ್ಣ, ಈ ಹಿಂದಿನ ಪ್ರಕರಣದಲ್ಲಿ ನೀಡಲಾಗಿರುವ ಜಾಮೀನಿನಲ್ಲಿ ಶ್ರೀಗಳು ಷರತ್ತುಗಳನ್ನು ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಜಾಮೀನು ನೀಡಬಾರದೆಂದು ವಾದ ಮಂಡಿಸಿದರು.
ಷರತ್ತಿನಲ್ಲಿ ತನಿಖೆಗೆ ಸಹಕರಿಸಬೇಕು, ಪ್ರತೀ ಭಾನುವಾರ ಪೊಲೀಸ್ ಠಾಣೆಗೆ ಆಗಮಿಸಿ ಸಹಿ ಹಾಕಬೇಕು, ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು ಸೂಚಿಸಲಾಗಿದೆ.