ಈ ಹಿನ್ನೆಲೆಯಲ್ಲಿ ಲೋಕಾಯುಕ್ತವು ಒಂದು ರೀತಿಯಲ್ಲಿ ಅರ್ಚಕರಿಲ್ಲದ ಗುಡಿಯಾಗಿದೆ. ಕಾಗೋಡು ತಿಮ್ಮಪ್ಪ ಅವರು ಲೋಕಾಯುಕ್ತ, ಉಪಲೋಕಾಯುಕ್ತರ ಪ್ರಸ್ತಾವನೆಗಳನ್ನು ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗೆ ಸಲ್ಲಿಸಿದ ಬಳಿಕ ಲೋಕಾಯುಕ್ತ ಸಂಸ್ಥೆ ದಿಕ್ಕಿಲ್ಲದೇ ಅನಾಥ ಸ್ಥಿತಿಗೆ ತಲುಪಿದೆ. ಬಿಜೆಪಿ ಅವಧಿಯಲ್ಲಿ ನೇಮಕವಾಗಿರುವ ಜಗದೀಶ್ ಶೆಟ್ಟರ್ ಅವರಿಗೆ ಆಪ್ತರಾಗಿರುವ ಸುಭಾಷ್ ಅಡಿ ಅವರು ಅಧಿಕಾರದಲ್ಲಿ ಮುಂದುವರಿದರೆ ಅಪಾಯ ಎಂಬ ಆತಂಕವೇ ಇವರ ನಡೆಗೆ ಕಾರಣವೆಂದು ವಿಶ್ಲೇಷಿಸಲಾಗುತ್ತಿದೆ.