ದೇವೇಗೌಡರನ್ನು ಹಾಡಿ,ಹೊಗಳಿದ ಯಡಿಯೂರಪ್ಪ

PR
PR
ಸಂಸತ್ತಿನಲ್ಲಿ ದೇವೇಗೌಡರ ಮಾರ್ಗದರ್ಶನ, ಅನುಭವ ಅಗತ್ಯವಿದೆ ಎಂದು ಬಿ.ಎಸ್.ಯಡಿಯೂರಪ್ಪ ದೇವೇಗೌಡರನ್ನು ಹಾಡಿ ಹೊಗಳಿದ್ದಾರೆ. ಲೋಕಸಭೆಗೆ ಸ್ಪರ್ಧೆ ಆತುರದ ನಿರ್ಧಾರವಲ್ಲ. ಸಾಕಷ್ಟು ಯೋಚಿಸಿಯೇ ನಿರ್ಧಾರಕ್ಕೆ ಬಂದಿದ್ದೇನೆ. ಕನಿಷ್ಟ 20ಕ್ಕೂ ಹೆಚ್ಚು ಲೋಕಸಭೆ ಚುನಾವಣೆಗಳಲ್ಲಿ ಗೆಲ್ತೇವೆ ಎಂಬ ವಿಶ್ವಾಸ ನನಗಿದೆ ಎಂದು ಶಿವಮೊಗ್ಗ ನಗರದಲ್ಲಿ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಯಡಿಯೂರಪ್ಪ ಹೇಳಿದರು.

ತಾವು ಬಂದ ನಂತರ ಬಿಜೆಪಿ ವರ್ಚಸ್ಸು ಹೆಚ್ಚಾಗಿದೆ ಎಂದು ಬಿಎಸ್‌ವೈ ಸ್ಪಷ್ಟಪಡಿಸಿದರು. ಚುನಾವಣೆ ಸಮಯದಲ್ಲಿ ಪ್ರತಿಪಕ್ಷದವರನ್ನು ಹಿಗ್ಗಾಮುಗ್ಗಾ ಟೀಕಿಸುತ್ತಿದ್ದ ಬಿಎಸ್‌ವೈ ಈಗ ಪ್ರತಿಪಕ್ಷದವರ ಬಗ್ಗೆ ಮೃದು ಧೋರಣೆ ತಳೆದಿರುವುದು ಆಶ್ಚರ್ಯ ಮೂಡಿಸಿದೆ.

ವೆಬ್ದುನಿಯಾವನ್ನು ಓದಿ