ಸಿದ್ದರಾಮಯ್ಯ ರೈತಹಂತಕ: ಜಗದೀಶ್ ಶೆಟ್ಟರ್ ವಾಗ್ದಾಳಿ

ಬುಧವಾರ, 26 ಮಾರ್ಚ್ 2014 (18:54 IST)
PR
PR
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರೈತಹಂತಕ. ಅವರಿಗೆ ಮೋದಿಯನ್ನು ನರಹಂತಕ ಎಂದು ಹೇಳುವ ನೈತಿಕತೆ ಇಲ್ಲ. ಕಬ್ಬು ಬೆಳೆಗಾರರ ಸಾವಿಗೆ ಸಿದ್ದರಾಮಯ್ಯ ಕಾರಣ ಎಂದು ಬಿಜೆಪಿ ಮುಖಂಡ ಜಗದೀಶ್ ಶೆಟ್ಟರ್ ಕೊಪ್ಪಳದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಮೋದಿ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. ಮೋದಿಯೇ ನಮ್ಮ ಮುಂದಿನ ಪ್ರಧಾನಮಂತ್ರಿಯಾಗಲಿದ್ದಾರೆ. ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಕಾಂಗ್ರೆಸ್‌ಗೆ ಎದೆಗಾರಿಕೆ ಇದ್ದರೆ ಕಾಂಗ್ರೆಸ್‌ನ ಪ್ರಧಾನಿ ಅಭ್ಯರ್ಥಿಯ ಹೆಸರನ್ನು ಘೋಷಿಸಲಿ.

ಹಿಂಬದಿಯಿಂದ ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸುವ ಹುನ್ನಾರವೇಕೆ ಎಂದು ಜಗದೀಶ್ ಶೆಟ್ಟರ್ ಕೇಳಿದ್ದಾರೆ. ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಮಾಧ್ಯಮ ಸಂವಾದದಲ್ಲಿ ಮಾತನಾಡುತ್ತಾ ಹರ ಹರ ಮೋದಿ ಅಲ್ಲ. ನರಹಂತಕ ಮೋದಿ ಎಂದು ಹೇಳಿದ್ದರು. ಅಲ್ಲದೇ ತಾವು ಭಾಷಣ ಮಾಡುವ ಕಡೆಯಲ್ಲೆಲ್ಲಾ ನರೇಂದ್ರ ಮೋದಿ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದರು.ಈ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ವಾಗ್ದಾಳಿ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ