ಚಪ್ಪಲಿ ಪಾಲಿಟಿಕ್ಸ್ ಬಗ್ಗೆ ಸುಮಲತಾ ಅಂಬರೀಶ್ ಹೇಳಿದ್ದೇನು?

ಸೋಮವಾರ, 1 ಏಪ್ರಿಲ್ 2019 (06:43 IST)
ಮಂಡ್ಯ : ಸುಮಲತಾ ಅಂಬರೀಶ್‌ ಅವರು ತನ್ನ ಗನ್​​ ಮ್ಯಾನ್​​​ ಗೆ ಚಪ್ಪಲಿ ತಗೆದುಕೊಡುವಂತೆ ಸೂಚಿಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು,ಬಾರೀ ಚರ್ಚೆಗೆ ಕಾರಣವಾಗಿದೆ.


ಮನೆಯಿಂದ ಹೊರಬರುತ್ತಿದ್ದಂತೆಯೇ ಸುಮಲತಾ ತಮ್ಮ ಚಾಲಕನಿಗೆ ಕೆಳಗೆ ಏನೋ ತೋರಿಸುವ ಮೂಲಕ ಸೂಚಿಸುತ್ತಾರೆ. ಆಗ ಚಾಲಕ ಕೆಳಗೆ ಬಗ್ಗಿ ಸುಮಲತಾ ಕಾಲಿಗೆ ಚಪ್ಪಲಿ ತೊಡಿಸಿದ್ದಾರೆ. ಇತ್ತ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಹಾಕಲು ಬಂದಾಗ ನಿಖಿಲ್  ತಡೆದು ತಾನೇ ಚಪ್ಪಲಿ ಹಾಕಿಕೊಂಡು ಅವರನ್ನು ಮುಟ್ಟಿ ಕೈ ಮುಗಿದಿರುವ ವಿಡಿಯೋ ಜೊತೆಗೆ ಸುಮಲತಾರ ದೃಶ್ಯಗಳನ್ನು ಹೊಂದಿಸಿ ಹರಿಬಿಡಲಾಗಿದೆ.


ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುಮಲತಾ, ಮಾರ್ಚ್ 20 ರಂದು ನಾಮಪತ್ರ ಸಲ್ಲಿಸಲು ಮನೆಯಿಂದ ಹೊರ ಹೋಗುತ್ತಿರುವ ಸಂದರ್ಭದ ಕೆಲ ದೃಶ್ಯಗಳು ವೈರಲ್ ಆಗಿವೆ. ನಾನು ಮತ್ತು ಪುತ್ರ ಅಭಿಷೇಕ್ ಭದ್ರತೆಗಾಗಿ ಗನ್ ಮ್ಯಾನ್ ಗಳನ್ನು ಇಟ್ಟುಕೊಂಡಿಲ್ಲ. ನಾಮಪತ್ರ ಸಲ್ಲಿಸಿದ ಬಳಿಕ ಭದ್ರತೆಗಾಗಿ ಇದೀಗ ಇಬ್ಬರು ಗನ್ ಮ್ಯಾನ್ ಗಳನ್ನು ನೇಮಕ ಮಾಡಲಾಗಿದೆ. ಅಂದು ಚಪ್ಪಲಿಯನ್ನು ನನಗೆ ನಮ್ಮ ಡ್ರೈವರ್ ನೀಡಿದ್ದರು. ನನ್ನ ಬಗ್ಗೆ ಮಾತನಾಡಲು ಕೆಲವರಿಗೆ ಏನೂ ಸಿಗದೇ ಜಿಗುಪ್ಸೆಯಿಂದ ಈ ರೀತಿಯ ವಿಡಿಯೋಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ