ಕೇಂದ್ರ ಸಚಿವೆಯ ಗುಣಗಾನ ಮಾಡಿದ ಕಾಂಗ್ರೆಸ್ ನಾಯಕ ಶಶಿತರೂರ್

ಬುಧವಾರ, 17 ಏಪ್ರಿಲ್ 2019 (11:12 IST)
ನವದೆಹಲಿ : ಕಾಂಗ್ರೆಸ್ ನಾಯಕ ಶಶಿತರೂರ್ ಅವರು ತಮ್ಮ ಟ್ವೀಟರ್ ನಲ್ಲಿ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಹಾಡಿ ಹೊಗಳಿದ್ದಾರೆ.


ಹೌದು. ಲೋಕಸಭಾ ಚುನಾವಣೆಯಲ್ಲಿ ಕೇರಳದ ತಿರುವನಂತಪುರಂ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶಶಿತರೂರ್ ಅವರು ದೇವಾಲಯವೊಂದರಲ್ಲಿ ತುಲಾಭಾರ ಮಾಡಿಸಿಕೊಳ್ಳುವಾಗ ತಕ್ಕಡಿ ಮುರಿದು ಬಿದ್ದ ಕಾರಣ ತಲೆ ಏಟಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.


ಈ ಹಿನ್ನಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಂಗ್ರೆಸ್ ನಾಯಕ ಶಶಿತರೂರ್ ಅವರ ನೋಡಲು  ಮಧ್ಯೆ ಕೇರಳ ಪ್ರವಾಸ ಕೈಗೊಂಡಿರುವ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿರುವ ಶಶಿ ತರೂರ್, ಬಿಡುವಿಲ್ಲದ ಚುನಾವಣಾ ಕಾರ್ಯಕ್ರಮಗಳ ನಡುವೆಯೂ ನಿರ್ಮಲಾ ಸೀತಾರಾಮನ್ ಅವರು ಭೇಟಿ ಮಾಡಿರುವುದು ನನ್ನ ಹೃದಯ ತುಂಬಿ ಬಂದಿದೆ. ಭಾರತೀಯ ರಾಜಕಾರಣದಲ್ಲಿ ನಾಗರಿಕತೆ ಎನ್ನುವುದು ಅಪರೂಪವಾಗುತ್ತಿರುವ ಮಧ್ಯೆ ನಿರ್ಮಲಾ ಸೀತಾರಾಮನ್ ಅವರ ನಡೆ ಮಾದರಿಯಾದದ್ದು ಎಂದು ಹಾಡಿ ಹೊಗಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ