ಮತದಾನ ಮಾಡದೇ ಪ್ರಚಾರ ಕಾರ್ಯದಲ್ಲಿ ತೊಡಗಿದ ಕಾಂಗ್ರೆಸ್ ನಾಯಕ

ಶುಕ್ರವಾರ, 19 ಏಪ್ರಿಲ್ 2019 (10:59 IST)
ಬೆಂಗಳೂರು : ನಿನ್ನೆ ನಡೆದ ರಾಜ್ಯದ ಮೊದಲನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಜನರಿಗೆ ಮಾದರಿಯಾಗಬೇಕಾಗಿದ್ದ ರಾಜಕೀಯ ನಾಯಕರೊಬ್ಬರು ಮತದಾನ ಮಾಡದೇ ಬೇಜವಬ್ದಾರಿ ತೋರಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಹೌದು. ನಿನ್ನೆ ನಡೆದ ಚುನಾವಣೆಯಲ್ಲಿ ಮತದಾನ ಮಾಡಲು ಜನರು ಬೇರೆ ಬೇರೆ ಊರುಗಳಿಂದ ಬಂದಿದ್ದರು. ಅಷ್ಟೇ ಅಲ್ಲದೇ ಕೈ ಕಾಲು ಕಳೆದುಕೊಂಡ ಅಂಗವೀಕಲರು, ವೃದ್ಧರು ಬಂದು ತಮ್ಮ ಮತವನ್ನು ಚಲಾಯಿಸಿದ್ದಾರೆ. ಆದರೆ ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ ಅವರು ಮಾತ್ರ ಮತದಾನ ಮಾಡದೇ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ.

 

ಬೆಂಗಳೂರು ದಕ್ಷಿಣ ಕ್ಷೇತ್ರದ ಮತದಾರರಾಗಿರುವ ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ವಿ.ಎಸ್.ಉಗ್ರಪ್ಪ ಅವರು ಅಲ್ಲಿ ಮತ ಚಲಾಯಿಸಬೇಕಿತ್ತು. ಆದರೆ ಅವರು ತಮ್ಮ ಜವಬ್ದಾರಿ ಮರೆತು ಬಳ್ಳಾರಿಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಜನರಿಗೆ ಮಾದರಿಯಾಗಬೇಕಾಗಿದ್ದ ಜನನಾಯಕರೇ ಹೀಗೆ ಮಾಡಿದರೆ ಮತ್ತೆ ಜನಸಾಮಾನ್ಯರ ಕತೆ ಏನು ಎಂಬುದು ಎಲ್ಲರ ಪ್ರಶ್ನೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ