ಚುನಾವಣೆ ಮುಗಿದರೂ ಇವ್ರು ತುಂಬಾ ಬ್ಯುಸಿ

ಶುಕ್ರವಾರ, 19 ಏಪ್ರಿಲ್ 2019 (14:05 IST)
ಲೋಕಸಭೆ ಚುನಾವಣೆಯ ಮತದಾನ ಮುಗಿದ ಮೇಲೆ ಕೆಲವು ಅಭ್ಯರ್ಥಿಗಳು ಹಾಗೂ ಮುಖಂಡರು ನಿಟ್ಟುಸಿರು ಬಿಟ್ಟು ಫಲಿತಾಂಶದತ್ತ ಚಿತ್ತ ಹರಿಸಿದ್ದರೆ ಇವರು ಮಾತ್ರ ಬ್ಯುಸಿಯಾಗಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಭೈರೇಗೌಡ ಬೆಳಗ್ಗೆಯಿಂದಲೇ ಬ್ಯುಸಿಯಾಗಿದ್ದರು. ಬೆಳಗ್ಗೆಯಿಂದಲೂ ಕ್ಷೇತ್ರದ ಮುಖಂಡರ ಜೊತೆ ಸಭೆ ನಡೆಸಿದ್ರು. ಕ್ಷೇತ್ರದ ಸಮಸ್ಯೆಗಳ ಬಗ್ಗೆ ಮುಖಂಡರ ಜೊತೆ ಚರ್ಚೆ ಮಾಡಿದ್ರು.

ಇಲ್ಲಿಯವರೆಗೂ ಪ್ರಚಾರದಲ್ಲಿ ಬ್ಯುಸಿಯಾಗಿದ್ದೆ. ಈಗ ಚುನಾವಣೆ ಮುಗಿದಿದೆ, ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದರು.

ಕುಟುಂಬಕ್ಕೆ ಸಮಯ ಮೀಸಲಿಡಲು ಸಾಧ್ಯವಾಗ್ತಿಲ್ಲ. ಕಾರ್ಯಕರ್ತರನ್ನ ಭೇಟಿ ಮಾಡಬೇಕಿದೆ. ನಾಳೆಯಿಂದ ಅಧಿಕೃತ ಕೆಲಸ ಪ್ರಾರಂಭಿಸುತ್ತೇನೆ ಎಂದರು. ಕ್ಷೇತ್ರದ ಜನರ ಮೇಲೆ ತುಂಬು ವಿಶ್ವಾಸವಿದೆ. ಈಗಲೇ ಏನು ಹೇಳಲ್ಲ, ಫಲಿತಾಂಶ ಬರಲಿ ಅಂತ ಬೆಂಗಳೂರು ಉತ್ತರ ಮೈತ್ರಿ ಅಭ್ಯರ್ಥಿ ಕೃಷ್ಣಭೈರೇಗೌಡ ಹೇಳಿಕೆ ನೀಡಿದ್ರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ