ಇವಿಎಂ ದೋಷವಿದ್ದ ಹಿನ್ನಲೆ: ಮರು ಮತದಾನಕ್ಕೆ ಆಂಧ್ರ ಸಿಎಂ ಆಗ್ರಹ

ಗುರುವಾರ, 11 ಏಪ್ರಿಲ್ 2019 (15:35 IST)
ಆಂಧ್ರಪ್ರದೇಶ : 2019 ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ 18 ರಾಜ್ಯ 2 ಕೇಂದ್ರಾಡಳಿತ ಪ್ರದೇಶಗಳ 91 ಕ್ಷೇತ್ರದ ವ್ಯಾಪ್ತಿಯಲ್ಲಿ ನಡೆಯುತ್ತಿದೆ.


ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅಮರಾವತಿಯಲ್ಲಿ ತಮ್ಮ ಕುಟುಂಬಸ್ಥರೊಂದಿಗೆ ಮತ ಚಲಾಯಿಸಿದರು. ಆದರೆ ಆಂಧ್ರ ಪ್ರದೇಶದ ಕುಪ್ಪಂ ಕ್ಷೇತ್ರದ ರಾಮಕುಪ್ಪಂ ಗುಡಿಪಲ್ಲಿ ಸೇರಿ 30 ಕಡೆ ಮತದಾನ ವಿಳಂಬವಾಗಿದೆ.

ಇದೀಗ  ಇವಿಎಂ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಅವರು, ಇವಿಎಂನಲ್ಲಿ ಶೇ.30 ರಷ್ಟು ಸಮರ್ಪಕವಾಗಿಲ್ಲ ಈ ಹಿನ್ನೆಲೆಯಲ್ಲಿ ಮರು ಮತದಾನ ನಡೆಸಬೇಕು ಎಂದು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ