ಕೈ ನಾಯಕ ರಾಜಣ್ಣ ಪರೋಕ್ಷವಾಗಿ ನಮಗೆ ಬೆಂಬಲ ನೀಡುತ್ತಾರೆ - ಬಿಜೆಪಿ ನಾಯಕರಿಂದ ಅಚ್ಚರಿಯ ಹೇಳಿಕೆ

ಸೋಮವಾರ, 15 ಏಪ್ರಿಲ್ 2019 (08:48 IST)
ತುಮಕೂರು : ಕಾಂಗ್ರೆಸ್ ಮಾಜಿ ಶಾಸಕ ಕೆಎನ್ ರಾಜಣ್ಣ ಅವರು ನೇರವಾಗಿ ಅಲ್ಲದಿದ್ದರೂ ಪರೋಕ್ಷವಾಗಿ ನಮಗೆ ಬೆಂಬಲ ನೀಡುತ್ತಾರೆ ಎಂದು ಬಿಜೆಪಿ ನಾಯಕ ವಿ.ಸೋಮಣ್ಣ ಹಾಗೂ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ತುಮಕೂರು ಕ್ಷೇತ್ರದ ಮಧುಗಿರಿಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ್ ಪರ ಪ್ರಚಾರ ನಡೆಸಿ ಮಾತನಾಡಿದ ವಿ.ಸೋಮಣ್ಣ ಹಾಗೂ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು, ರಾಜಣ್ಣ ಅವರ ಅಭಿವೃದ್ಧಿ ಕೆಲಸ ನಮಗೆ ಅನುಕೂಲವಾಗಲಿದೆ. ಮೈತ್ರಿ ಬಗ್ಗೆ ಬೇಸರ ಇರುವುದಾಗಿ ರಾಜಣ್ಣ ಅವರು ಮಾಧ್ಯಮಗಳಲ್ಲಿ ಹೇಳಿದ್ದಾರೆ. ಹಾಗಾಗಿ ಆಂತರಿಕವಾಗಿ ನಮಗೆ ಬೆಂಬಲ ನೀಡುತ್ತಾರೆ. ಅವರ ನಾಮಪತ್ರವನ್ನು ಒತ್ತಾಯದಿಂದ ಹಿಂಪಡೆಯುವಂತೆ ಮಾಡಿದ್ದಾರೆ. ಅವರಿಗೆ ಮೈತ್ರಿಯಲ್ಲಿ ಅಸಮಾಧಾನ ಇದೆ. ಈ ಅಸಮಾಧಾನ ನಮಗೆ ಅನುಕೂಲ ಆಗಲಿದೆ  ಎಂದು ಕೆಎನ್ ರಾಜಣ್ಣ ಅವರನ್ನು ಹಾಡಿ ಹೊಗಳಿದ್ದಾರೆ.

 

ಚುನಾವಣೆಗೆ ಕೆಲ ದಿನಗಳು ಇರುವ ಸಂದರ್ಭದಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಮಾಜಿ ಶಾಸಕ ರಾಜಣ್ಣ ಅವರನ್ನು ಹಾಡಿ ಹೊಗಳುವ ರೀತಿ ಅಚ್ಚರಿ ಮೂಡಿಸಿದ್ದಲ್ಲದೇ ತುಮಕೂರು ಕ್ಷೇತ್ರದ ಮೈತ್ರಿ ಅಭ್ಯರ್ಥಿ ಹೆಚ್. ಡಿ.ದೇವೆಗೌಡರಿಗೆ ಕೈ ಕೊಡುತ್ತಾರಾ ರಾಜಣ್ಣ ಎಂಬ ಅನುಮಾನ ಇದೀಗ ಶುರುವಾಗಿದೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ