ರಾಜೀವ್ ಗಾಂಧಿಯನ್ನು ನಂ.1 ಭ್ರಷ್ಟಾಚಾರಿ ಎಂದ ಪ್ರಧಾನಿ ಮೋದಿ ಮೇಲೆ ಗರಂ ಆದ ಸಿದ್ಧರಾಮಯ್ಯ

ಸೋಮವಾರ, 6 ಮೇ 2019 (11:25 IST)
ಬೆಂಗಳೂರು : ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯನ್ನು ನಂ.1 ಭ್ರಷ್ಟಾಚಾರಿ ಎಂದ ಪ್ರಧಾನಿ ಮೋದಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.




ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಮೋದಿ ಆಡಳಿತ ಅಂತ್ಯವಾಗುತ್ತಿದ್ದು, ವಿನಾಶಕಾಲದಲ್ಲಿ ವಿಪರೀತ ಬುದ್ಧಿ ಎಂಬಂತೆ ಮಾತನಾಡುತ್ತಿದ್ದಾರೆ. ತಾಯಿಯಂತೆಯೇ ಉಗ್ರರಿಗೆ ಬಲಿಯಾದ ರಾಜೀವ್ ಜಿ ಬಗ್ಗೆ ನೀಚತನದ ಮಾತನಾಡುತ್ತಿರುವ ಮೋದಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರ ಚಿಕಿತ್ಸೆಗೆ ಬೇಕಾದ ವಿಶ್ರಾಂತಿಯನ್ನು ದೇಶದ ಮತದಾರರು ಈ ಬಾರಿ ನೀಡುತ್ತಾರೆ ಎಂದು ಕಿಡಿಕಾರಿದ್ದಾರೆ.


ಹಿರಿಯಣ್ಣನ ಚಾಳಿ ಮನೆ ಮಂದಿಗೆಲ್ಲ ಬಂದಿದೆ. ಸೋಲಿನ ಭೀತಿಯಲ್ಲಿರುವ ಮೋದಿಯಿಂದ ಈಶ್ವರಪ್ಪನವರೆಗೆ ಎಲ್ಲರ ನಾಲಿಗೆಗಳಲ್ಲಿ ಈ ಹತಾಶೆ ಕಾಣಿಸುತ್ತಿದೆ. ಸಾರ್ವಜನಿಕ ಹಿತದೃಷ್ಠಿಯಿಂದ `ಮೈ ಚೌಕಿದಾರ್ ಅಲ್ಲ ಮೈ ಪಾಗಲ್ ಎಂದು ಬಿಜೆಪಿ ನಾಯಕರೆಲ್ಲ ಘೋಷಿಸಿಕೊಳ್ಳುವುದು ಒಳ್ಳೆಯದು ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ