ನನಗೆ ಮಂಡ್ಯವೇ ಸಿಂಗಾಪುರ ಎಂದು ತಿರುಗೇಟು ಕೊಟ್ಟ ಸುಮಲತಾ ಅಂಬರೀಶ್

ಸೋಮವಾರ, 22 ಏಪ್ರಿಲ್ 2019 (07:19 IST)
ಮಂಡ್ಯ: ತಾವು ಸಿಂಗಾಪುರಕ್ಕೆ ಹೋಗುವ ವಿಚಾರ ಕೆದಕಿ ಟಾಂಗ್ ಹೊಡೆದಿದ್ದ ಜೆಡಿಎಸ್ ನಾಯಕರಿಗೆ ಸುಮಲತಾ ಅಂಬರೀಶ್ ತಿರುಗೇಟು ನೀಡಿದ್ದಾರೆ.

 
ತಮಗೆ ಚುನಾವಣೆಯಲ್ಲಿ ನೆರವು ನೀಡಿದವರಿಗೆ ಕೃತಜ್ಞತೆ ಸಲ್ಲಿಸಲು ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸುಮಲತಾ ಅಂಬರೀಶ್ ನಾನು ರಾಜಕೀಯಕ್ಕಾಗಿ ಮಂಡ್ಯಕ್ಕೆ ಬರಲಿಲ್ಲ. ಮಂಡ್ಯಕ್ಕಾಗಿ ರಾಜಕೀಯಕ್ಕೆ ಬಂದೆ. ನನಗೆ ಮಂಡ್ಯವೇ ಸಿಂಗಾಪುರ. ಮಂಡ್ಯದ ಹೊರತಾಗಿ ನಾನು ಬೇರೆ ಎಲ್ಲಿ ಹೋಗಲಿ? ಎಂದು ತಿರುಗೇಟು ನೀಡಿದ್ದಾರೆ.

ಅಲ್ಲದೆ, ತಮಗೆ ಚುನಾವಣೆ ಸಂದರ್ಭದಲ್ಲಿ ನೆರವು ನೀಡಿದ ಕಾಂಗ್ರೆಸ್ ಕಾರ್ಯಕರ್ತರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ರೈತ ಸಂಘದವರು ಸೇರಿದಂತೆ ಎಲ್ಲರಿಗೂ ಸುಮಲತಾ ಕೃತಜ್ಞತೆ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ