ವ್ಯಕ್ತಿಯ ಅಂದ ಚೆಂದದ ಬಗ್ಗೆ ಮಾತನಾಡುವುದನ್ನು ಬಿಟ್ಟು ರಾಜ್ಯದ ಅಭಿವೃದ್ಧಿಗೆ ಗಮನ ಕೊಡಿ- ಸಿಎಂಗೆ ರಾಜು ಕಾಗೆ ಟಾಂಗ್

ಬುಧವಾರ, 17 ಏಪ್ರಿಲ್ 2019 (09:34 IST)
ಬೆಳಗಾವಿ : ಪ್ರಧಾನಿ ಮೋದಿಯ ಅಂದ ಚೆಂದದ ಬಗ್ಗೆ ಮಾತನಾಡಿದ ಸಿಎಂ ಕುಮಾರಸ್ವಾಮಿಗೆ ರಾಜ್ಯದ ಅಭಿವೃದ್ಧಿಗೆ ಗಮನ ಕೊಡಿ ಎಂದು ಬಿಜೆಪಿ ಮಾಜಿ ಶಾಸಕ ರಾಜು ಕಾಗೆ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ದಿನಕ್ಕೆ 10 ಬಾರಿ ಮೇಕಪ್ ಮಾಡಿಕೊಂಡು ಕ್ಯಾಮೆರಾ ಮುಂದೆ ಬರುತ್ತಾರೆ ಎಂಬ ಸಿಎಂ ಕುಮಾರಸ್ವಾಮಿ ಹೇಳಿಕೆ  ನೀಡಿದ್ದರು. ಈ ಬಗ್ಗೆ ಅಥಣಿ ತಾಲೂಕಿನ ಕಾಗವಾಡದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿದ ಮಾಜಿ ಶಾಸಕ ರಾಜು ಕಾಗೆ ಅವರು ಕುಮಾರಸ್ವಾಮಿ ನಿನ್ನ ನೂರು ಬಾರಿ ಮೈ ತೊಳೆದರೂ ನೀನು ಎಮ್ಮೆ ರೀತಿ ಇರುತ್ತೀಯಾ ಎಂದು ವ್ಯಂಗ್ಯವಾಡಿದ್ದಾರೆ.

 

ಪ್ರಧಾನಿ ನರೇಂದ್ರ ಮೋದಿ ಸುಂದರ, ಚಂದ ಮತ್ತು ಬೆಳ್ಳಗಿದ್ದಾರೆ. ವ್ಯಕ್ತಿಯ ಅಂದ ಚಂದದ ಬಗ್ಗೆ ಸುಮ್ಮನೆ ಯಾಕೆ ಮಾತನಾಡುತ್ತೀರಾ? ಈ ರಾಜ್ಯದ ಜವಾಬ್ದಾರಿಯುತ ಸ್ಥಾನದಲ್ಲಿದ್ದು, ರಾಜ್ಯದ ಅಭಿವೃದ್ಧಿಗೆ ಗಮನ ಕೊಡಬೇಕು ಎಂದು ಕಿಡಿಕಾರಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ