ಮತದಾರರಿಗೆ ಮಂಜುನಾಥನ ಫೊಟೋ ಕೊಟ್ಟು ಆಣೆ ಮಾಡಿಸ್ತಿದ್ದಾರೆ- ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ವಿರುದ್ಧ ಆರೋಪ

ಬುಧವಾರ, 17 ಏಪ್ರಿಲ್ 2019 (11:22 IST)
ಬೆಂಗಳೂರು : ಮತದಾರರನ್ನು ಕಟ್ಟಿ ಹಾಕಲು ಜೆಡಿಎಸ್ ಆಣೆ-ಪ್ರಮಾಣದ ಗಿಮಿಕ್ ಮಾಡುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ವಿರುದ್ಧ ಆರೋಪ ಮಾಡಲಾಗಿದೆ.

ಮತದಾರರಿಗೆ ಜೆಡಿಎಸ್ ನವರು ಮಂಜುನಾಥನ ಫೊಟೋ ಕೊಟ್ಟು ಆಣೆ ಮಾಡಿಸ್ತಿದ್ದಾರೆ. ಈ ಮೂಲಕ ಮತದಾರರನ್ನು ಕಟ್ಟಿ ಹಾಕಲು ಜೆಡಿಎಸ್ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

 

‘ಅಭಿಷೇಕ್ ದಿ ರೆಬಲ್’ ಎಂಬ ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಮಾದರಿ ಬ್ಯಾಲೆಟ್ ಪೇಪರ್ ಜೊತೆ ಮಂಜುನಾಥ ಸ್ವಾಮಿಯ ಫೋಟೋ ಹಾಕಿ ಪೋಸ್ಟ್ ಮಾಡಿ ಆರೋಪ ಮಾಡಿದ್ದು,  ಈ ಪೋಸ್ಟ್ ವೈರಲ್ ಆಗಿದೆ. ಈ ಬಗ್ಗೆ ಜೆಡಿಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಸುಳ್ಳು ಸುಳ್ಳು ಪೋಟೋ ವೈರಲ್ ಮಾಡ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ