ಪ್ರಧಾನಿ ಮೋದಿಯನ್ನು ತೆಗಳುವ ಭರದಲ್ಲಿ ಪಾಕ್ ಪ್ರಧಾನಿಯನ್ನು ಹೊಗಳಿದ ಕೈ ಶಾಸಕ

ಶುಕ್ರವಾರ, 12 ಏಪ್ರಿಲ್ 2019 (10:59 IST)
ಉಡುಪಿ : ಕಾಂಗ್ರೆಸ್ ಶಾಸಕರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರನ್ನು ತೆಗಳುವ ಭರದಲ್ಲಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಒಬ್ಬ ಸಜ್ಜನ ವ್ಯಕ್ತಿ ಎಂದು ಹೊಗಳಿದ್ದಾರೆ.


ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಪರ ಎನ್.ಆರ್ ಪುರದ ಮೆಣಸೂರಿನಲ್ಲಿ ನಡೆದ ಸಮಾವೇಶದಲ್ಲಿ ಶೃಂಗೇರಿಯ ಕಾಂಗ್ರೆಸ್ ಶಾಸಕ ರಾಜೇಗೌಡರು ಪಾಲ್ಗೊಂಡಿದ್ದರು. ಆ ವೇಳೆ ಮಾತನಾಡಿದ ಅವರು, ದೇಶದಲ್ಲಿ ಪ್ರಧಾನಿ ಮೋದಿ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ. ಸರ್ಜಿಕಲ್ ಸ್ಟ್ರೈಕ್ ಹೆಸರಿನಲ್ಲಿ ದೇಶದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ನಮ್ಮ ಯುದ್ಧ ವಿಮಾನ ಪಾಕಿಸ್ತಾನದ ಗಡಿಗೆ ಹೋಗಿತ್ತು. ಅವರ ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದು ನಿಜ. ಬಳಿಕ ವಿಂಗ್ ಕಮಾಂಡರ್ ಅಭಿನಂದನ್ ರನ್ನು ವಶದಲ್ಲಿಟ್ಟುಕೊಂಡಿದ್ದು ನಿಜ ಎಂದು ಹೇಳಿದ್ದಾರೆ.


ಆದರೆ ಅಭಿನಂದನ್ ಬಂಧನದ ಬಳಿಕ ಮೋದಿ ಪಾಕಿಸ್ತಾನಕ್ಕೆ ಬೆದರಿಕೆ ಹಾಕಿದ್ರು, ಆದರೆ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಒಬ್ಬ ಸಜ್ಜನ ವ್ಯಕ್ತಿ. ಅವರು ನಮ್ಮ ದೇಶವನ್ನು ನೋಡಿದ್ದಾರೆ. ನಮ್ಮ ಸೈನಿಕರನ್ನು ನೋಡಿ ಇಮ್ರಾನ್ ಖಾನ್ ವಿಂಗ್ ಕಮಾಂಡರ್ ಅಭಿನಂದನ್ ರನ್ನು ಬಿಡುಗಡೆಗೊಳಿಸಿದ್ದೇ ಹೊರತು ಮೋದಿ ಬೆದರಿಕೆಯಿಂದಲ್ಲ ಎಂದು ಪಾಕ್ ಪ್ರಧಾನಿಯ ಗುಣಗಾನ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ