ಬಾಳಿಗೊಂದು ಬಂಗಾರದ ಮಾತು

ಬುಧವಾರ, 26 ಅಕ್ಟೋಬರ್ 2016 (09:31 IST)
ಗುರುಗಳು ಗುರುಕುಲದಲ್ಲಿ ತಮ್ಮ ಶಿಷ್ಯರೊಡನೆ ಮಾತನಾಡುತ್ತ ಕುಳಿತಿದ್ದರು. ಆಗ ತಕ್ಷಣ ಅವರು, 'ಎಲ್ಲರೂ ಗಮನವಿಟ್ಟು ಕೇಳಿ. ನಿಮಗೊಂದು ಸಮಸ್ಯೆಯನ್ನು ಹೇಳುತ್ತಿದ್ದೇನೆ. ಅದರ ನಿಜವಾದ ಅರ್ಥವನ್ನು ಯಾರಾದರೂ ಹೇಳ ಬಲ್ಲಿರಾ ಎಂದು ಕೇಳಿದರು. ಎಲ್ಲರೂ ಶಾಂತರಾಗಿ ಗುರುಗಳ ಮಾತನ್ನು ಕೇಳತೊಡಗಿದರು.
 
 
ಗುರುಗಳು ಒಂದು ಕಥೆಯನ್ನು ಹೇಳಿದರು.
ಒಬ್ಬ ಮನುಷ್ಯ ದೇವರನ್ನು ಪ್ರಾರ್ಥಿಸಿದಾಗ ಅವನು ಭೂಮಿಯ ಮೇಲೆ ಬದುಕಿ ಉಳಿಯುವ ದಿನಗಳು ಹೆಚ್ಚಿಲ್ಲ ಎಂದು ಗೊತ್ತಾಯಿತು. ಅವನಿಗೆ ಭಯ, ದುಃಖ ಆದವು. 
 
ತನ್ನನ್ನು ನೆಲದಲ್ಲಿ ಹೂಳಿ ದಾಗ ಗೋರಿಯಲ್ಲಿ ತಾನೊಬ್ಬನೇ ಇರಬೇಕಲ್ಲ ಎಂಬ ಭಯ ಕಾಡತೊಡಗಿತು. ತನಗೆ ಯಾರಾದರೂ ಜೊತೆಯಾಗಿರಲು ಒಪ್ಪಿಯಾರು ಎಂದುಕೊಂಡು ತನಗೆ ಅತ್ಯಂತ ಆಪ್ತರಾದ ಮೂವರು ಸ್ನೇಹಿತರನ್ನು ನೆನಪಿಸಿಕೊಂಡು ಮೊದಲನೆ ಸ್ನೇಹಿತನ ಹತ್ತಿರ ಹೋದ. 
 
'ಗೆಳೆಯಾ, ನನಗೆ ತುಂಬ ಭಯವಾಗುತ್ತಿದೆ. ಯಾವಾಗಲೂ ನನ್ನ ಜೊತೆಗೇ ಇರುತ್ತೀಯಾ'
ಎಂದು ಕೇಳಿದ.
 
'ಗೆಳೆಯ, ನೀನೇಕೆ ಚಿಂತೆ ಮಾಡುತ್ತೀ? ನಾನು ಸದಾ ನಿನ್ನೊಡನೆಯೇ ಇರುತ್ತೇನೆ' ಎಂದು ಭರವಸೆ ಕೊಟ್ಟ. ಆಗ ಈತ, 'ಹಾಗಲ್ಲ, ನಾನು ಕೆಲವೇ ದಿನಗಳಲ್ಲಿ ಸಾಯುವವನಿದ್ದೇನೆ. ನನಗೆ ಗೋರಿ ಯಲ್ಲಿ ಒಬ್ಬನೇ ಇರಲು ಭಯ' ಎಂದ.
 
ಸ್ನೇಹಿತ ಬಿಳಿಚಿಕೊಂಡು, 'ನಾನು ನಿನ್ನ ಸ್ನೇಹಿತನೇನೋ ಸರಿ. ಆದರೆ ಸಾವು ನಮ್ಮನ್ನು ಬೇರ್ಪಡಿಸುತ್ತ ದಲ್ಲ?  ನಾನು ಬೇಕಾದರೆ ಸ್ಮಶಾನ ದಲ್ಲಿ ಸಮಾಧಿಗೆ ನಿನಗೊಂದು ಪುಟ್ಟ ಜಾಗ ಕೊಂಡುಕೊಡಬಲ್ಲೆ, ನಿನ್ನ ಸಮಾಧಿಯ ಮೇಲೆ ಸುಂದರವಾದ ಬಟ್ಟೆಯನ್ನು ಹೊದಿಸಬಲ್ಲೆ, ಆದರೆ ನಿನ್ನೊಡನೆ ಗೋರಿಯ ಒಳಗೆ ಬರ ಲಾರೆ'  ಎಂದ.
 
ಈತ ದುಃಖದಿಂದಮತ್ತೊಬ್ಬ ಸ್ನೇಹಿ ತನ ಮನೆಗೆ ಹೋಗಿ ಇದೇ ಸಮಸ್ಯೆ ಯನ್ನು ಅವನ ಮುಂದಿಟ್ಟು ಸತ್ತನಂತರ  ತನ್ನೊಂದಿಗೆ ಇರಲು ಕೇಳಿಕೊಂಡ. ಆತ ಹೇಳಿದ, 'ಗೆಳೆಯಾ, ನಾನು ಯಾವಾಗಲೂ ನಿನ್ನೊಂದಿಗೇ ಇದ್ದೇನೆ, ನಿನ್ನ ಕೊನೆ ಕ್ಷಣದವರೆಗೂ ನಿನ್ನೊಡನೆ ಇರು ತ್ತೇನೆ. ಆದರೆ ಸಾವು ನಿನ್ನನ್ನು ಬೇರ್ಪ ಡಿಸಿದಾಗ ಬಹಳ ಹೆಚ್ಚೆಂದರೆ ನಾನು ನಿನ್ನನ್ನು ಹೆಗಲಮೇಲೆ ಹೊತ್ತು ಕೊಂಡು ಸ್ಮಶಾನದವರೆಗೆ ಬಂದು ನಿನ್ನ ದೇಹವನ್ನು ಗೋರಿಯಲ್ಲಿರಿಸಿ ಬರಬಹುದು. ಅನಂತರ ನಾನು ಏನೂ ಮಾಡಲಾರೆ, ಕ್ಷಮಿಸು' ಎಂದ...
 
ಇವನ ದುಃಖ ಮತ್ತಷ್ಟು ಹೆಚ್ಚಾ ಯಿತು. ನಿರಾಶನಾಗಿ ಮೂರನೆಯ ಗೆಳೆಯನಲ್ಲಿಗೆ ಹೋಗಿ ಇದನ್ನೇ ವಿಸ್ತರಿಸಿ ತನ್ನ ಇನ್ನಿಬ್ಬರು ಹೇಳಿದ ಮಾತುಗಳನ್ನು ಒಪ್ಪಿಸಿದ.  ಅವನಿಗೆ ಇವನಿಂದಲೂ ಅವರು ನುಡಿದಂಥ ಮಾತುಗಳೇ ಬರುತ್ತವೆಂಬುದು ಖಚಿತವಾಗಿತ್ತು. ಆದರೆ ಆ 3 ನೇ ಗೆಳೆಯ ಹೇಳಿದ, 'ಚಿಂತೆ ಬಿಡು ಮಿತ್ರ, ನಾನು ನಿನ್ನೊ ಡನೆ ಸ್ಮಶಾನಕ್ಕೆ ಮಾತ್ರವಲ್ಲ, ಗೋರಿ ಗೂ ಬರುತ್ತೇನೆ. ದೇವತೆಗಳು ಬಂದು ನಿನ್ನ ಪ್ರಶ್ನಿಸುವಾಗಲೂ ನಾನು ನಿನಗೆ ಸಹಾಯ ಮಾಡುತ್ತೇನೆ. ಸೇತುವೆ ಯನ್ನು ದಾಟಿ ಸ್ವರ್ಗಕ್ಕೆ ಹೋಗು ವಾಗಲೂ ನಾನು ಮುಂದೆ ನಿಂತು ನಡೆಸುತ್ತೇನೆ ಎಂದನು.
 
ಈ ಮಾತುಗಳನ್ನು ಕೇಳಿ ಆ ವ್ಯಕ್ತಿಗೆ ತುಂಬ ಸಮಾಧಾನವಾಯಿತು.
 
ಈ ಕಥೆಯನ್ನು ಹೇಳಿ ಗುರುಗಳು  ಕೇಳಿದರು, 'ಆ ಮೂವರು ಸ್ನೇಹಿತರು ಯಾರು ಗೊತ್ತೇ..........?' ಎಂದರು.
 
ಶಿಷ್ಯರಿಂದ ಉತ್ತರ ಬರದಿದ್ದಾಗ ತಾವೇ ನುಡಿದರು. ಮೊದಲನೆಯ ಸ್ನೇಹಿತ ಹಣ. ಅದು ನಿಮಗಾಗಿ ಸ್ಮಶಾನದಲ್ಲಿ ಸ್ಥಳ ಕೊಳ್ಳುವುದಕ್ಕೆ, ಬಟ್ಟೆ ಕೊಳ್ಳಲಿಕ್ಕೆ ಮಾತ್ರ ಪ್ರಯೋಜನಕಾರಿ.
ಎರಡನೆಯ ಸ್ನೇಹಿತ, ಹೆಂಡತಿ, ಮಕ್ಕಳು ಮತ್ತು ಪರಿವಾರ. ಅವರು ನಿಮ್ಮನ್ನು ಹೊತ್ತುಕೊಂಡು ಸ್ಮಶಾನದವರೆಗೆ ಮಾತ್ರ ಬರಬಲ್ಲರು. 
ಮೂರನೆಯ ಸ್ನೇಹಿತ, ನೀವು ಮಾಡಿದ ಧರ್ಮ ಕಾರ್ಯಗಳು. ಅವು ನಿಮ್ಮನ್ನು ಸ್ವರ್ಗದವರೆಗೂ ಹಿಂಬಾಲಿಸಿ ಬರುತ್ತವೆ .
 
ಎಂಥ ಅದ್ಭುತ ಮಾತು! ಅಲ್ಲವೇ. ಅದಕ್ಕೆ ಇದ್ದಷ್ಟು ದಿನ ನಾನು, ನನ್ನದು ಎನ್ನದೆ, ಪರರಿಗೆ ಕೇಡು ಬಗೆಯದೆ ಪ್ರಾಮಾಣಿಕವಾಗಿ ಧರ್ಮ ಕಾರ್ಯದಲ್ಕಿ ನಡೆಯಬೇಕು ಎಂದು ಹಿರಿಯರು ಹೇಳಿದ್ದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ