ಭಾರತದೊಂದಿಗೆ ಕಾರ್ಯನಿರ್ವಹಿಸಲು ಮುಂದಾದ ಬಾಂಗ್ಲಾ!

ಗುರುವಾರ, 27 ಜನವರಿ 2022 (08:50 IST)
ಢಾಕಾ : ಭಾರತದೊಂದಿಗೆ ಕಾರ್ಯನಿರ್ವಹಿಸಲು ಬಾಂಗ್ಲಾದೇಶ ಉತ್ಸುಕವಾಗಿದೆ ಪ್ರಧಾನ ಮಂತ್ರಿ ಶೇಖ್ ಹಸೀನಾ ಹೇಳಿದ್ದಾರೆ.

ದೇಶದ 73ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಭಾರತದ ಜನತೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭಾಶಯ ಕೋರಿ ಅವರು ಈ ಹೇಳಿಕೆ ನೀಡಿದ್ದಾರೆ. ಈ ಕುರಿತು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಭಾರತ ಮತ್ತು ಬಾಂಗ್ಲಾದೇಶದ ಬಾಂಧವ್ಯಕ್ಕೆ 2021 ಒಂದು ಐತಿಹಾಸಿಕ ವರ್ಷವಾಗಿದೆ. ಈ ವೇಳೆ ಉಭಯ ರಾಷ್ಟ್ರಗಳ ನಡುವೆ ಉನ್ನತ ಮಟ್ಟದ ಸಭೆಗಳು, ಕಾರ್ಯಕ್ರಮಗಳು ನಡೆದಿವೆ ಎಂದು ಅವರು ಉಲ್ಲೇಖಿಸಿದ್ದಾರೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ