ಪ್ರಧಾನಮಂತ್ರಿ ನರೇಂದ್ರ ಮೋದಿ ಅರುಣಾಚಲ ಪ್ರದೇಶಕ್ಕೆ ನೀಡಿದ ಭೇಟಿ ಕುರಿತಂತೆ ಚೀನಾ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮೋದಿ ಮತ್ತೊಮ್ಮೆ ಭೇಟಿ ನೀಡಿದಲ್ಲಿ ಗಡಿ ವಿವಾದ ಮತ್ತಷ್ಟು ಉಲ್ಬಣವಾಗುತ್ತದೆ ಎಂದು ಚೀನಾ ಎಚ್ಚರಿಕೆಯ ಸಂದೇಶ ರವಾನಿಸಿದೆ.
ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಪಕ್ಷಕ್ಕೆ ಹೆಚ್ಚಿನ ಬೆಂಬಲ ಪಡೆಯುವ ನಿರೀಕ್ಷೆಯಲ್ಲಿ ಭೇಟಿಯ ಉದ್ದೇಶವಾಗಿರಬಹುದು. ಅಥವಾ ಅನೇಕ ಜನಪರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ನಿರ್ಧಾರವೂ ಆಗಿರಬಹುದು. ಆದರೆ, ಭಾರತ-ಚೀನಾ ನಡುವಿನ ಗಡಿ ವಿವಾದ ಮತ್ತಷ್ಟು ಉಲ್ಬಣಗೊಳ್ಳುವ ಸಾಧ್ಯತೆಗಳಿವೆ ಎನ್ನುವುದು ರಾಜಕೀಯ ತಜ್ಞರ ಲೆಕ್ಕಾಚಾರವಾಗಿದೆ.