ಕಬಾಲಿ ಟಿಕೆಟ್ ದೊರೆಯದಿದ್ದರಿಂದ ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ

ಶುಕ್ರವಾರ, 22 ಜುಲೈ 2016 (12:33 IST)
ವಿಶ್ವದಲ್ಲೇ ಬಾರಿ ಸದ್ದು ಮಾಡಿರುವ ರಜನಿಕಾಂತ್ ಅಭಿನಯದ ಕಬಾಲಿ ಸಿನಿಮಾ ಟಿಕೆಟ್ ದೊರೆಯಲಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬ ಮಾಲ್ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿ ಹುಚ್ಚು ಅಭಿಮಾನಕ್ಕೆ ಸಾಕ್ಷಿಯಾಗಿದ್ದಾನೆ.
 
ರಜನಿಕಾಂತ್ ಅಭಿನಯದ ಕಬಾಲಿ ಸಿನಿಮಾ ಮೊದಲ ಶೋನಲ್ಲೇ ನೊಡಬೇಕು ಎಂದು ಆಶೆ ಹೊತ್ತಿದ್ದ ಯವಕನೊಬ್ಬನಿಗೆ, ಮೊದಲ ಶೋ ಟಿಕೆಟ್ ದೊರೆಯಲಿಲ್ಲ ಎಂದು ಮನನೊಂದು ಮಲೇಶಿಯಾದ 15 ಅಂತಸ್ಥಿನ ಮಾಲ್ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.
 
ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕನನ್ನು ಆಸ್ವತ್ರೆಗೆ ರವಾನಿಸಲಾಗಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ