ಅವಶ್ಯಕತೆ ಬಿದ್ದರೆ ಉಗ್ರರನ್ನು ಪಾಕಿಸ್ತಾನದಲ್ಲಿಯೇ ಸದೆಬಡೆಯುತ್ತೇವೆ : ರಾಜನಾಥ್ ಸಿಂಗ್

ಸೋಮವಾರ, 30 ಆಗಸ್ಟ್ 2021 (10:41 IST)
ಊಟಿ : ಕೇವಲ ಭಾರತದ ನೆಲದಲ್ಲಿ ಮಾತ್ರ ಭಯೋತ್ಪಾದನೆಯನ್ನು ಮಟ್ಟ ಹಾಕಲ್ಲ. ಅವಶ್ಯಕತೆ ಬಿದ್ದರೆ ಪಾಕಿಸ್ತಾನದ ನೆಲದಲ್ಲಿ ಕಾರ್ಯಾಚರಣೆ ನಡೆಸಿ ಉಗ್ರರನ್ನು ಹೊಡೆದುರುಳಿಸುತ್ತೇವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ.

ತಮಿಳುನಾಡಿನ ವೆಲ್ಲಿಂಗ್ಟನ್ನ ಡಿಫೆನ್ಸ್ ಸರ್ವಿಸ್ ಸ್ಟಾಫ್ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಕಿಸ್ತಾನ ಉಗ್ರರಿಗೆ ಶಸ್ತ್ರಾಸ್ತ್ರ, ಅನುದಾನ ಹಾಗೂ ತರಬೇತಿ ನೀಡುವ ಮೂಲಕ ಭಾರತವನ್ನು ಟಾರ್ಗೆಟ್ ಮಾಡಿದೆ. ನಮ್ಮ ಗಡಿಯಲ್ಲಿನ ಸವಾಲುಗಳನ್ನು ಹೊರತಪಡಿಸಿ, ಭಾರತದ ರಾಷ್ಟ್ರೀಯ ಭದ್ರತೆಯಲ್ಲಿ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಲ್ಲ ಎಂದು ಹೇಳಿದ್ದಾರೆ.
ಭಾರತದ ವಿರುದ್ಧ ಎರಡು ಯುದ್ಧಗಳನ್ನು ಸೋತ ಬಳಿಕ ಪಾಕಿಸ್ತಾನ ಛಾಯಾ ಸಮರಕ್ಕೆ ಮುಂದಾಗಿದ್ದು, ಭಯೋತ್ಪಾದನೆಯನ್ನು ತನ್ನ ರಾಷ್ಟ್ರೀಯ ನೀತಿಯಲ್ಲಿ ಅಳವಡಿಸಿಕೊಂಡಿದೆ. ಭಯೋತ್ಪಾದಕರಿಗೆ ಶಸ್ತ್ರಾಸ್ತ್ರ, ಅನುದಾನ ಹಾಗೂ ತರಬೇತಿಯನ್ನು ನೀಡಿ ಭಾರತವನ್ನು ಟಾರ್ಗೆಟ್ ಮಾಡಿದೆ ಎಂದು ನೆರೆ ರಾಷ್ಟ್ರ ಪಾಕಿಸ್ತಾನದ ವಿರುದ್ಧ ಕಿಡಿಕಾರಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ