ವಿಶ್ವಸಂಸ್ಥೆ: ಜಮ್ಮು ಕಾಶ್ಮೀರದಲ್ಲಿ ಜನಮತಗಣನೆ ನಡೆಸಬೇಕೆಂಬ ಪಾಕಿಸ್ತಾನದ ಕರೆಯನ್ನು ಭಾರತ ಪ್ರಬಲವಾಗಿ ವಿರೋಧಿಸಿದ್ದು, ರಾಜ್ಯವು ದೇಶದ ಅವಿಭಾಜ್ಯ ಅಂಗವಾಗಿದ್ದು, ಅದರ ಪೌರರು ಪ್ರಜಾಪ್ರಭುತ್ವ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ ಎಂದು ಭಾರತ ಪ್ರತಿಪಾದಿಸಿದೆ. ಈ ವೇದಿಕೆಯು ಅಂತರ ಸಂಸದೀಯ ಸಂಘಟನೆಯ ವೇದಿಕೆಯಾಗಿದ್ದು, 2030ನೇ
ಆದರೆ ಜಾಗತಿಕ ಅಭಿವೃದ್ಧಿ ಕಾರ್ಯಸೂಚಿಗೆ ಗಮನಹರಿಸುವ ವೇದಿಕೆಯಲ್ಲಿ ಕಾಶ್ಮೀರ ವಿಷಯವನ್ನು ಎತ್ತಿದ ಪಾಕಿಸ್ತಾನದ ನಡೆಯನ್ನು ಮಹಾಜನ್ ಪ್ರಬಲವಾಗಿ ವಿರೋಧಿಸಿದ್ದರು. ಜಮ್ಮು ಕಾಶ್ಮೀರ ಸ್ವಾತಂತ್ರ್ಯ ಬಂದಾಗಿನಿಂದಲೂ ಭಾರತದ ಅವಿಭಾಜ್ಯ ಅಂಗವಾಗಿದ್ದು, ಪ್ರಜಾಪ್ರಭುತ್ವವಾದಿ ಚುನಾವಣೆಗಳು ರಾಜ್ಯದಲ್ಲಿ ನಡೆಯುತ್ತವೆ ಎಂದು ಮಹಾಜನ್ ಗಮನಸೆಳೆದರು.