ಕುಲಭೂಷಣ್ ಜಾಧವ್ ಗೆ ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸುವ ಅವಕಾಶ ನೀಡಲು ಮುಂದಾದ ಪಾಕಿಸ್ತಾನ

ಗುರುವಾರ, 14 ನವೆಂಬರ್ 2019 (09:40 IST)
ಪಾಕಿಸ್ತಾನ : ಪಾಕಿಸ್ತಾನದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾದ ಭಾರತದ ನೌಕಾಪಡೆಯ ಮಾಜಿ ಅಧಿಕಾರಿ ಕುಲಭೂಷಣ್ ಜಾಧವ್ ಅವರಿಗಾಗಿ ಪಾಕಿಸ್ತಾನವು ತನ್ನ ಸೇನಾ ಕಾಯ್ದೆಗೆ ತಿದ್ದುಪಡಿ ತರಲು ನಿರ್ಧಾರ ಮಾಡಿದೆ ಎಂಬುದಾಗಿ ತಿಳಿದುಬಂದಿದೆ.




ಬೇಹುಗಾರಿಕೆ ನಡೆಸಿದ ಆರೋಪದಲ್ಲಿ ಬಂಧನಕ್ಕೊಳಗಾದ ಕುಲಭೂಷಣ್ ಜಾಧವ್ ಗೆ ಸೇನಾ ನ್ಯಾಯಾಲಯ ಸೇನಾ ಕಾಯ್ದೆಯಡಿ ಮರಣದಂಡನೆ ಶಿಕ್ಷೆಯನ್ನು ವಿಧಿಸಿತ್ತು. ಆದರೆ ಅದರ ವಿರುದ್ಧ ಮೇಲ್ಮನವಿ ಸಲ್ಲಿಸುವ ಅವಕಾಶ ಆ ಕಾನೂನಿನಲ್ಲಿ ಇರಲಿಲ್ಲ.  ಈ ಬಗ್ಗೆ ಭಾರತ ಅಂತರಾಷ್ಟ್ರೀಯ ನ್ಯಾಯಾಲಯದಲ್ಲಿ ಪ್ರಶ್ನಿಸಿದ ಹಿನ್ನಲೆಯಲ್ಲಿ ಕೋರ್ಟ್ ಅವರ ಗಲ್ಲುಶಿಕ್ಷೆಯನ್ನು ಪರಾಮರ್ಶಿಸುವಂತೆ ಸೂಚಿಸಿತ್ತು.


ಆದಕಾರಣ ಕುಲಭೂಷಣ್ ಜಾಧವ್ ಅವರು ತಮ್ಮ ಶಿಕ್ಷೆಯ ಬಗ್ಗೆ  ಸಿವಿಲಿಯನ್ ನ್ಯಾಯಾಲಯದಲ್ಲಿ ಪ್ರಶ್ನಿಸಿ ಅರ್ಜಿ ಸಲ್ಲಿಸಲು ಅವಕಾಶವಾಗುವಂತೆ ಪಾಕಿಸ್ತಾನವು ತನ್ನ ಸೇನಾ ಕಾಯ್ದೆಗೆ ತಿದ್ದುಪಡಿ ತರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ