ಧ್ವನಿವರ್ಧಕಗಳ ವಿಚಾರದಲ್ಲಿ ತಾಳ್ಮೆಯನ್ನು ಪರೀಕ್ಷಿಸಬೇಡಿ ಎಂದ ರಾಜ್ ಠಾಕ್ರೆ

ಬುಧವಾರ, 11 ಮೇ 2022 (11:01 IST)
ಮುಂಬೈ : ಮಸೀದಿ ಧ್ವನಿವರ್ಧಕಗಳ ವಿಚಾರದಲ್ಲಿ ನಮ್ಮ ತಾಳ್ಮೆಯನ್ನು ಪರೀಕ್ಷಿಸಬೇಡಿ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಎಂಎನ್ಎಸ್ ಅಧ್ಯಕ್ಷ ಎಚ್ಚರಿಕೆ ನೀಡಿದರು.

ಈ ಬಗ್ಗೆ ಮಾತನಾಡಿದ ಅವರು, 28,000 ಎಂಎನ್ಎಸ್ ಕಾರ್ಯಕರ್ತರಿಗೆ ನೋಟಿಸ್ ನೀಡಲಾಗಿದೆ. ಹಾಗೂ ಸಾವಿರಾರು ಜನರನ್ನು ಹೊರಹಾಕಲಾಗಿದೆ. ಈ ಎಲ್ಲಾ ಪೊಲೀಸರ ಕ್ರಮವು ಶಬ್ದ ಮಾಲಿನ್ಯಕ್ಕೆ ಕಾರಣವಾಗುವ ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದು ಹಾಕಲು ಕೇಳಿದ್ದಕ್ಕಾಗಿ ಆಗಿದೆ ಎಂದು ವಾಗ್ದಾಳಿ ನಡೆಸಿದರು.

ಮಹಾರಾಷ್ಟ್ರ ನವ ನಿರ್ಮಾಣ ಸೇನೆಯ ನಾಯಕರನ್ನು ಪಾಕಿಸ್ತಾನಿ ಭಯೋತ್ಪಾದಕರು ಅಥವಾ ಹಿಂದಿನ ನಿಜಾಮ್ ಆಳ್ವಿಕೆಯಲ್ಲಿದ್ದ ರಜಾಕರು ಎಂಬಂತೆ ಪೊಲೀಸರು ಹುಡುಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ