ಅಭಿಮಾನಿಗಳಿಗೆ ಸಾರಿ, ಮತ್ತೆ ಬರ್ತೀವಿ ಎಂದು ಸಂದೇಶಕೊಟ್ಟ ವಿರಾಟ್ ಕೊಹ್ಲಿ

ಗುರುವಾರ, 18 ಮೇ 2017 (06:51 IST)
ನವದೆಹಲಿ: ಈ ಬಾರಿಯ ಐಪಿಎಲ್ ನಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನ ನಿರಾಶಾದಾಯಕವಾಗಿತ್ತು. ಹೀಗಾಗಿ ಕೊಹ್ಲಿ ತಮ್ಮ ಅಭಿಮಾನಿಗಳಿಗೆ ವಿಶೇಷ ಸಂದೇಶ ರವಾನಿಸಿದ್ದಾರೆ.

 
ಟ್ವಿಟರ್ ಪೇಜ್ ನಲ್ಲಿ ವಿಡಿಯೋ ಸಂದೇಶ ನೀಡಿರುವ ವಿರಾಟ್ ಭಾವನಾತ್ಮಕವಾಗಿ ಮಾತನಾಡಿದ್ದಾರೆ. ‘ಈ ಆವೃತ್ತಿಯಲ್ಲಿ ನಿಮ್ಮ ಬೆಂಬಲದಿಂದ ನಮ್ಮ ಹೃದಯ ತುಂಬಿ ಬಂದಿದೆ.  ಮುಂದಿನ ಆವೃತ್ತಿಯಲ್ಲಿ ಪುಟಿದೆದ್ದು ಬರುತ್ತೀವಿ’ ಎಂದು ಕೊಹ್ಲಿ ಅಭಿಮಾನಿಗಳಿಗೆ ಭರವಸೆ ನೀಡಿದ್ದಾರೆ.

ಈ ಆವೃತ್ತಿಯಲ್ಲಿ ಕೊಹ್ಲಿ ಸೇರಿದಂತೆ ಆರ್ ಸಿಬಿ ತಂಡದ ಖ್ಯಾತ ಆಟಗಾರರು ಯಾರೂ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿರಲಿಲ್ಲ. ಸಾಲು ಸಾಲು ಸೋಲಿನ ನಂತರ ಕೊನೆಯ ಪಂದ್ಯದಲ್ಲಿ ಗೆಲುವು ಕಂಡಿತ್ತು. ಆದರೆ ಅಷ್ಟರಲ್ಲಿ ಆರ್ ಸಿಬಿ ಕೊನೆಯ ಸ್ಥಾನ ಪಡೆದಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ವೆಬ್ದುನಿಯಾವನ್ನು ಓದಿ