ಮುಂಬೈ ಇಂಡಿಯನ್ಸ್ ನಿಂದಲೂ ಯುವರಾಜ್ ಸಿಂಗ್ ಕಿತ್ತೊಗೆಯಲು ಆಗ್ರಹ

ಶನಿವಾರ, 6 ಏಪ್ರಿಲ್ 2019 (09:24 IST)
ಮುಂಬೈ: ಸತತವಾಗಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ ಕಾರಣಕ್ಕೆ ಟೀಂ ಇಂಡಿಯಾದಿಂದ ಹೊರಬಿದ್ದ ಹಿರಿಯ ಕ್ರಿಕೆಟಿಗ ಯುವರಾಜ್ ಸಿಂಗ್ ರನ್ನು ಐಪಿಎಲ್ ನ ಮುಂಬೈ ಇಂಡಿಯನ್ಸ್ ತಂಡದಿಂದಲೂ ಹೊರ ಹಾಕಿ ಎಂದು ಅಭಿಮಾನಿಗಳು ಆಗ್ರಹಿಸಿದ್ದಾರೆ.


ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಕಳೆದ ವರ್ಷ ಆಡಿದ್ದ ಯುವರಾಜ್ ಸಿಂಗ್ ಅಲ್ಲೂ ಕಳಪೆ ಪ್ರದರ್ಶನ ತೋರಿದ್ದಕ್ಕೆ ಟ್ರೋಲ್ ಗೊಳಗಾಗಿದ್ದರು. ಈ ವರ್ಷ ಮುಂಬೈ ಇಂಡಿಯನ್ಸ್ ಪಾಳಯ ಸೇರಿಕೊಂಡಿರುವ ಯುವರಾಜ್ ಗೆ ಮತ್ತೆ ಅಭಿಮಾನಿಗಳು ಕಳಪೆ ಪ್ರದರ್ಶನ ನೀಡಿದ್ದಕ್ಕೆ ಟ್ರೋಲ್ ಮಾಡಿದ್ದಾರೆ.

ಯುವರಾಜ್ ಬದಲು ಆ ಕ್ರಮಾಂಕದಲ್ಲಿ ಯುವ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಇಶಾನ್ ಕಿಶನ್ ಗೆ ಸ್ಥಾನ ನೀಡಿ ಎಂದು ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ಆರ್ ಸಿಬಿ ವಿರುದ್ಧದ ಪಂದ್ಯದಲ್ಲಿ ಬಿಟ್ಟರೆ ಉಳಿದೆಲ್ಲಾ ಪಂದ್ಯಗಳಲ್ಲೂ ಯುವಿ ಪ್ರದರ್ಶನ ನಿರಾಶಾದಾಯಕವಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ