ಮಹಾರಾಷ್ಟ್ರ ರಾಜ್ಯದಲ್ಲಿ ನೀರಿನ ಬಿಕ್ಕಟ್ಟಿಗೆ ಇಂಡಿಯನ್ ಪ್ರೀಮಿಯರ್ ಲೀಗನ್ನು ಹೊಣೆಯಾಗಿಸಬಾರದು ಎಂದು ಭಾರತದ ಹಿರಿಯ ಬ್ಯಾಟ್ಸ್ಮನ್ ಯುವರಾಜ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ. ಬಾಂಬೆ ಹೈಕೋರ್ಟ್ ಇತ್ತೀಚೆಗೆ ಎಲ್ಲಾ ಐಪಿಎಲ್ ಪಂದ್ಯಗಳನ್ನು ಮೇ ತಿಂಗಳಿನಿಂದ ಮಹಾರಾಷ್ಟ್ರದ ಹೊರಗೆ ಸ್ಥಳಾಂತರಿಸುವಂತೆ ಸೂಚಿಸಿತ್ತು. ರಾಜ್ಯವು ಮೂಲತಃ ಮುಂಬೈ, ಪುಣೆ, ನಾಗ್ಪುರದಲ್ಲಿ 20 ಐಪಿಎಲ್ ಪಂದ್ಯಗಳನ್ನು ಆಡಿಸಬೇಕಿತ್ತು.