ಐಪಿಎಲ್‌: ಟಾಸ್‌ ಗೆದ್ದ ಕೆಕೆಆರ್‌ ಬೌಲಿಂಗ್ ಆಯ್ಕೆ, ಆರ್‌ಸಿಬಿ ಬ್ಯಾಟಿಂಗ್

Sampriya

ಶುಕ್ರವಾರ, 29 ಮಾರ್ಚ್ 2024 (19:19 IST)
Photo Courtesy X
Photo Courtesy X
ಬೆಂಗಳೂರು: ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ  ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಮುಖಾಮುಖಿಯಾಗಲಿದೆ.

ಟಾಸ್ ಗೆದ್ದ ಕೆಕೆಆರ್ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡು, ಆರ್‌ಸಿಬಿಯನ್ನು  ಬ್ಯಾಟಿಂಗ್‌ಗೆ ಆಹ್ವಾನಿಸಿದೆ.

ಎರಡೂ ತಂಡಗಳು ಈ ಪಂದ್ಯದ ಗೆಲುವಿಗೆ ಟಾರ್ಗೆಟ್ ಇಟ್ಟಿದ್ದು,  ಗೆದ್ದು ಅಂಕಪಟ್ಟಿಯಲ್ಲಿ ತಮ್ಮ ಸ್ಥಾನವನ್ನು ಭದ್ರ ಪಡಿಸಿಕೊಳ್ಳುವ ಇರಾದೆಯಲ್ಲಿವೆ.

ಈ  ಲೀಗ್​ನಲ್ಲಿ ಆರ್​ಸಿಬಿಗೆ ಇದು ಮೂರನೇ ಪಂದ್ಯವಾಗಿದ್ದರೆ, ಕೆಕೆಆರ್​ಗೆ ಇದು ಎರಡನೇ ಪಂದ್ಯವಾಗಿದೆ. ಕೋಲ್ಕತ್ತಾ ನೈಟ್​ ರೈಡರ್ಸ್ ತಂಡದಲ್ಲಿ ಒಂದು ಬದಲಾವಣೆಯಾಗಿದೆ. ಅನುಕುಲ್ ರಾಯ್​ ಅವರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆದರೆ ಆರ್​ಸಿಬಿ ತಂಡದಲ್ಲಿ ಯಾವುದೇ ಬದಲಾವಣೆ ಕಂಡಿಲ್ಲ. ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿದೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ