ಛತ್ತೀಸ್ಗಡ್ ರಾಜ್ಯದಲ್ಲಿ ವ್ಯಾಪಾರ ವಹಿವಾಟಿನ ಪ್ರಕ್ರಿಯೆಗಳನ್ನು ಮತ್ತಷ್ಟು ಸುಲಭಗೊಳಿಸಲು ಪ್ರಯತ್ನ ನಡೆಸುತ್ತಿದ್ದು, ಹೊಸದಾಗಿ ವ್ಯಾಪಾರ ಪ್ರಾರಂಭಿಸಲು ಅನುಮತಿ ನೀಡವಾಗ ವಿವಿಧ ಇಲಾಖೆಗಳು ತೆಗೆದುಕೊಳ್ಳುತ್ತಿದ್ದ ದೀರ್ಘ ಸಮಯವನ್ನು ಕುಗ್ಗಿಸಿದ್ದೇವೆ. ಇದೀಗ, ವ್ಯಾಪಾರೀಕರಣಕ್ಕೆ ನೀಡುವ ಅನುಮತಿ ಪ್ರಕ್ರಿಯೆಯನ್ನು ಮತ್ತಷ್ಟು ಸುಲಭಗೊಳಿಸುವ ಮೂಲಕ ನಮ್ಮ ಸರಕಾರ 'ಮೇಕ್ ಇನ್ ಇಂಡಿಯಾ' ಹಾಗೂ 'ಮೇಕ್ ಇನ್ ಛತ್ತೀಸ್ಗಡ್' ಯೋಜನೆಗೆ ಹೆಚ್ಚಿನ ಆಧ್ಯತೆ ನೀಡುತ್ತಿದೆ. ಹಾಗೂ ಛತ್ತೀಸ್ಗಡ್ ರಾಜ್ಯದಲ್ಲಿ ಬಂಡವಾಳ ಹೂಡಿಕೆಯನ್ನು ಹೆಚ್ಚಿಸಲು ಯತ್ನಿಸುತ್ತಿದ್ದೇವೆ ಎಂದು ಹೇಳಿದರು.
ಉಜ್ವಲ ಯೋಜನೆ, ರಸ್ತೆ ನಿರ್ಮಾಣ, ವೈದ್ಯಕೀಯ ಕಾಲೇಜುಗಳ ಪಾತ್ರ, ಸೇತುವೆಗಳು, ಜಲಾಶಯ ಯೋಜನೆಗಳ ಕುರಿತು ಸಾರ್ವಜನಿಕರು ತಿಳಿದುಕೊಳ್ಳುವುದು ಅವಶ್ಯಕವಾಗಿದೆ ಎಂದು ಛತ್ತೀಸ್ಗಡ್ ಮುಖ್ಯಮಂತ್ರಿ ರಮಣ್ ಸಿಂಗ್ ತಿಳಿಸಿದ್ದಾರೆ.