ವಿಜಯ್ ಮಲ್ಯಗೆ ಹಿನ್ನೆಡೆ: ಅರ್ಜಿ ವಜಾಗೊಳಿಸಿದ ಜಾರಿ ನಿರ್ದೇಶನಾಲಯ

ಮಂಗಳವಾರ, 16 ಮೇ 2017 (19:15 IST)
ಆಸ್ತಿ ಜಪ್ತಿ ಆದೇಶದ ವಿರುದ್ಧ ಉದ್ಯಮಿ ವಿಜಯ್ ಮಲ್ಯ ಸಲ್ಲಿಸಿದ ಅರ್ಜಿಯನ್ನು ಜಾರಿ ನಿರ್ದೇಶನಾಲಯ ವಜಾಗೊಳಿಸಿದ್ದರಿಂದ ಮಲ್ಯಗೆ ಭಾರಿ ಹಿನ್ನೆಡೆಯಾಗಿದೆ.
 
ಮಾಂಡ್ಯ ಫಾರ್ಮ್‌ಹೌಸ್ ಜಪ್ತಿ ಮಾಡದಂತೆ ಅಧಿಕಾರಿಗಳಿಗೆ ಆದೇಶ ನೀಡಬೇಕು ಎಂದು ಕೋರಿ ಮಲ್ಯ ಜಾರಿ ನಿರ್ದೇಶನಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದೀಗ ಜಾರಿ ನಿರ್ದೇಶನಾಲಯ ಅವರ ಅರ್ಜಿಯನ್ನು ತಿರಸ್ಕರಿಸಿದೆ.
 
ದೇಶದಲ್ಲಿ 9 ಸಾವಿರ ಕೋಟಿ ರೂಪಾಯಿ ಸಾಲ ಮಾಡಿ, ಮರುಪಾವತಿ ಮಾಡದೇ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಮಲ್ಯ, ದೇಶದ ಹಲವಾರು ಬ್ಯಾಂಕ್‌ಗಳನ್ನು ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ.
 
ಲಂಡನ್‌ನಲ್ಲಿ ನೆಲೆಸಿರುವ ಉದ್ಯಮಿ ವಿಜಯ್ ಮಲ್ಯ ಅವರನ್ನು ಗಡಿಪಾರು ಮಾಡುವಂತೆ ಕೇಂದ್ರ ಸರಕಾರ ಲಂಡನ್‌ ಕೋರ್ಟ್‌ಗೆ ಮನವಿ ಮಾಡಿತ್ತು. ಇದೀಗ ಪ್ರಕರಣ ವಿಚಾರಣೆಯ ಹಂತದಲ್ಲಿದೆ ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ