25 ವರ್ಷಗಳ ನಂತರವೂ ಭಾರತದಲ್ಲಿ ಬದಲಾವಣೆಯಾಗಿಲ್ಲ: ಮನಮೋಹನ್ ಸಿಂಗ್

ಶುಕ್ರವಾರ, 1 ಜುಲೈ 2016 (17:08 IST)
ಭಾರತದ ಆರ್ಥಿಕತೆಯಲ್ಲಿ ಕಳೆದ 25 ವರ್ಷಗಳಿಂದ ಯಾವುದೇ ತರಹದ ಬದಲಾವಣೆಯಾಗಿಲ್ಲ. ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾದಾಗ ಮಾತ್ರ ನಾವು ಸುಧಾರಣೆ ಕ್ರಮಗಳತ್ತ ಗಮನ ಹರಿಸುತ್ತೇವೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ತಿಳಿಸಿದ್ದಾರೆ. 
 
ದೇಶದ ಆರ್ಥಿಕತೆಯಲ್ಲಿ ಕಳೆದ 25 ವರ್ಷಗಳಿಂದ ಯಾವುದೇ ತರಹದ ಬದಲಾವಣೆಯಾಗಿಲ್ಲ. ಭಾರತದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾದಾಗ ಮಾತ್ರ ನಾವು ಸುಧಾರಣೆ ಕ್ರಮಗಳತ್ತ ಗಮನ ಹರಿಸುತ್ತೇವೆ. ಉಳಿದ ಸಂದರ್ಭದಲ್ಲಿ ಯಾವುದೇ ಸುಧಾರಣೆ ಕ್ರಮಗಳತ್ತ ಗಮನ ಹರಿಸುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
1990 ರಲ್ಲಿ ಭಾರತ ಭಾರಿ ಆರ್ಥಿಕ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಎದುರಿಸುತ್ತಿತ್ತು. ಆ ಸಮಯದಲ್ಲಿ ಆರ್ಥಿಕ ಬಿಕ್ಕಟ್ಟಿನಿಂದ ಹೊರ ಬರಲು ಕೇಂದ್ರ ಸರಕಾರ ಐಎಮ್‌ಎಫ್ ಬಳಿ ದೇಶದ ಚಿನ್ನವನ್ನು ಅಡವಾಗಿಟ್ಟು, ಸಾಲವನ್ನು ಪಡೆದು ದೇಶದ ಆರ್ಥಿಕ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಸುಧಾರಿಸಿದ್ದರು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ