‘ಅಗ್ನಿಸಾಕ್ಷಿ’ ಸ್ವಾಮೀಜಿ, ನಟ ಸುದರ್ಶನ್ ಗೆ ಗಾಯ

ಬುಧವಾರ, 6 ಸೆಪ್ಟಂಬರ್ 2017 (09:37 IST)
ಬೆಂಗಳೂರು: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಅಗ್ನಿಸಾಕ್ಷಿ ಧಾರವಾಹಿಯಲ್ಲಿ ಸ್ವಾಮೀಜಿ ಪಾತ್ರ ನಿಭಾಯಿಸುತ್ತಿದ್ದ ಹಿರಿಯ ನಟ ಸುದರ್ಶನ್ ಗೆ ಬಿದ್ದು ಕಾಲಿಗೆ ಏಟು ಮಾಡಿಕೊಂಡಿದ್ದಾರೆ.

 
ಸ್ಯಾಂಡಲ್ ವುಡ್ ನ ಹಿರಿಯ  ತಾರೆ ಸುದರ್ಶನ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯವಿದ್ದರೂ ಶೂಟಿಂಗ್ ಗೆ ಹಾಜರಾಗುತ್ತಿದ್ದರು. ಆದರೆ ಇದೀಗ ಮನೆಯಲ್ಲಿ ರಾತ್ರಿ ವೇಳೆ ಬಾತ್ ರೂಂನಲ್ಲಿ ಕಾಲು ಜಾರಿ ಬಿದ್ದಿದ್ದು, ಕಾಲಿನ ಮೂಳೆ ಮುರಿತವಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಹಳೆಯ ಕಾಲದ ಹಲವು ಸೂಪರ್ ಹಿಟ್ ಚಿತ್ರಗಳಲ್ಲಿ ಅಭಿನಯಿಸಿದ್ದ ಹಿರಿಯ ನಟನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಸದ್ಯಕ್ಕೆ ಚೇತರಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ.. ಧವನ್ ಅನುಪಸ್ಥಿತಿಯಲ್ಲೂ ಕೆಎಲ್ ರಾಹುಲ್ ಗಿಲ್ಲ ಆರಂಭಿಕ ಸ್ಥಾನ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ