ವಯನಾಡು ದುರಂತಕ್ಕೆ ಮಿಡಿದ ಅಲ್ಲು ಅರ್ಜುನ್‌ರಿಂದ 25 ಲಕ್ಷ ನೆರವು

Sampriya

ಭಾನುವಾರ, 4 ಆಗಸ್ಟ್ 2024 (15:32 IST)
Photo Courtesy X
ಹೈದರಾಬಾದ್: ಕೇರಳದ ಭೀಕರ ಭೂಕುಸಿತಕ್ಕೆ ಒಳಗಾಗಿರುವ ವಯನಾಡು ಜಿಲ್ಲೆಯಲ್ಲಿ ಪುನರ್ವಸತಿಗಾಗಿ ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿಗೆ ತೆಲುಗಿನ ಸೂಪರ್ ಸ್ಟಾರ್ ಅಲ್ಲು ಅರ್ಜುನ್ 25ಲಕ್ಷ ದೇಣಿಗೆ ನೀಡುವುದಾಗಿ ಹೇಳಿದ್ದಾರೆ.

ಜುಲೈ 30ರಂದು ವಯನಾಡಿನ ಎರಡು ಕಡೆ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೃತರ ಸಂಖ್ಯೆ 219ಕ್ಕೆ ಏರಿಕೆಯಾಗಿದ್ದು, ಇನ್ನೂ 200ಮಂದಿ ನಾಪತ್ತೆಯಾಗಿದ್ದಾರೆ. ಈಗಾಗಲೇ ವಯನಾಡು ದುರಂತಕ್ಕೆ ಮಿಡಿದಿರುವ ಸಿನಿಮಾ ತಾರೆಯರಾದ ನಟ ಸೂರ್ಯ, ಕಾರ್ತಿ, ಜ್ಯೋತಿಕಾ ಹಾಗೂ ರಶ್ಮಿಕಾ ಮಂದಣ್ಣ ಅವರು ಧನ ಸಹಾಯ ನೀಡಿದ್ದಾರೆ.

ಇದೀಗ ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅಲ್ಲು ಅರ್ಜುನ್, ಯಾವಾಗಲೂ ತನಗೆ ಹೆಚ್ಚಿನ ಪ್ರೀತಿಯನ್ನು ನೀಡುತ್ತಿರುವ ರಾಜ್ಯಕ್ಕೆ ತನ್ನ ಕೈಲಾದಷ್ಟು ಸಹಾಯ ಮಾಡಲು ಬಯಸುತ್ತೇನೆ ಎಂದು ಹೇಳಿದ್ದಾರೆ.

"ವಯನಾಡಿನಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕುಸಿತದಿಂದ ನಾನು ತುಂಬಾ ದುಃಖಿತನಾಗಿದ್ದೇನೆ. ಕೇರಳ ಯಾವಾಗಲೂ ನನಗೆ ತುಂಬಾ ಪ್ರೀತಿಯನ್ನು ನೀಡಿದ್ದು, ಪುನರ್ವಸತಿ ಕಾರ್ಯವನ್ನು ಬೆಂಬಲಿಸಲು ಕೇರಳ ಸಿಎಂ ಪರಿಹಾರ ನಿಧಿಗೆ 25 ಲಕ್ಷ ದೇಣಿಗೆ ನೀಡುವ ಮೂಲಕ ನನ್ನ ಕೈಲಾದಷ್ಟು ಮಾಡಲು ಬಯಸುತ್ತೇನೆ. ನಿಮ್ಮ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ