"ಅಹಂಕಾರದಿಂದಲ್ಲ ದುರಹಂಕಾರದಿಂದ ಹೇಳ್ತಿದ್ದೀನಿ...ಇಡೀ ಸಮಾಜದ ದಿಕ್ಕನ್ನೇ ಬದಲಾಯಿಸ್ತೀನಿ..."ಎಂಬ ಈ ಚಿತ್ರದ ಬಗೆಗಿನ ಇನ್ನೆರಡು ಸಾಲುಗಳು ಇದ್ಯಾವ ರೀತಿಯ ಚಿತ್ರ ಇರಬಹುದು ಎಂದು ಕುತೂಹಲ ಮೂಡಿವಂತೆ ಮಾಡಿದೆ. ಶರ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾಗುತ್ತಿರುವ ಡಿ. ಗಣೇಶ್ ವಿ ನಾಗೇನಹಳ್ಳಿ ನಿರ್ಮಿಸಿ ಎಸ್ ಅಭಿ ಹನಕೆರೆ ನಿರ್ದೇಶನದ ಈ ಚಿತ್ರಕ್ಕೆ ಗುರುಕಿರಣ್ ಸಂಗೀತವಿದೆ.
ಗೋವಾ, ಮುಂಬೈ, ದೆಹಲಿ, ಪುಣೆ, ಕೋಲ್ಕತ್ತಾ, ಚೆನ್ನೈ, ಕೊಯಮತ್ತೂರು, ಹೊಸೂರು, ಕಾಸರಗೋಡು ಮತ್ತಿತರ ಕಡೆ ಆರಂಭ ಚಿತ್ರವನ್ನು ಚಿತ್ರೀಕರಿಸಲಾಗಿದೆ. ಈ ಚಿತ್ರದ ಟ್ಯಾಗ್ ಲೈನ್ "Last Chance" ಎಂಬುದು. ನಟ ಮಿಥುನ್ ಪ್ರಕಾಶ್, ಅಭಿರಾಮಿ ಸೇರಿದಂತೆ ಕಲಾವಿದರ ಬಳಗವೇ ಈ ಚಿತ್ರದಲ್ಲಿದೆ. ಗುರುಕಿರಣ್, ಗೋಟುರಿ, ಕವಿರಾಜ್, ಅಭಿ ಹನಕೆರೆ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ. ನಾಗರಾಜ್ ಛಾಯಾಗ್ರಹಣ, ಗಿರೀಶ್ ಸಂಕಲನ ಹಾಗೂ ಸಂದೀಪ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.