ನಟ ಅಜಯ್ ರಾವ್ ಸೇರಿ ನಾಲ್ವರಿಗೆ ಜಾಮೀನು

ಗುರುವಾರ, 26 ಆಗಸ್ಟ್ 2021 (19:21 IST)

ಲವ್ ಯು ರಚ್ಚು ಚಿತ್ರೀಕರಣದ ವೇಳೆ ಸಂಭವಿಸಿದ ದುರಂತ ಪ್ರಕರಣದಲ್ಲಿ ನಟ ಅಜಯ್ ರಾವ್, ನಿರ್ದೇಶಕ ಶಂಕರ್ ಸೇರಿದಂತೆ ನಾಲ್ವರಿಗೆ ನ್ಯಾಯಾಲಯ ಜಾಮೀ

ನು ಮಂಜೂರು ಮಾಡಿದೆ.

ರಾಮನಗರದ 3ನೇ ಅಪಾರ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸಿದ್ದಲಿಂಗಪ್ರಭು ನಾಲ್ವರಿಗೆ ಜಾಮೀನು ಮಂಜೂರು ಮಾಡಿರು.

ಚಿತ್ರದ ನಿರ್ದೇಶಕ ಶಂಕರ್, ಕ್ರೇನ್ ಚಾಲಕ ಮಹದೇವ್, ಫೈಟ್ ಮಾಸ್ಟರ್ ವಿನೋದ್ ಕುಮಾರ್ ಹಾಗೂ ನಟ ಅಜಯ್ ರಾವ್ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಜೋಗರಪಾಳ್ಯ ಗ್ರಾಮದಲ್ಲಿ ಚಿತ್ರೀಕರಣ ವೇಳೆ ಸಾಹಸ ಕಲಾವಿದ ವಿವೇಕ್ ವಿದ್ಯುತ್ ತಂತಿ ತಗುಲಿ ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ನಟ ಅಜಯ್ ರಾವ್ ಅವರನ್ನು ಹೊರತುಪಡಿಸಿ ಮೂವರನ್ನು ಬಂಧಿಸಲಾಗಿತ್ತು. ಈ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ