ವಿಷ್ಣುವರ್ಧನ್ ಸ್ಮಾರಕ ನೆಲಸಮ ಬೆನ್ನಲ್ಲೇ ಸಿಎಂ ಭೇಟಿಯಾದ ನಟ ಅನಿರುದ್ಧ್‌, ಯಾಕೆ ಗೊತ್ತಾ

Sampriya

ಗುರುವಾರ, 28 ಆಗಸ್ಟ್ 2025 (17:21 IST)
Photo Credit X
ಬೆಂಗಳೂರು: ದಿವಂಗತ, ನಟ ಸಾಹಸಸಿಂಹ ವಿಷ್ಣುವರ್ಧನ್‌ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ನೀಡುವಂತೆ ಅವರ ಅಳಿಯ ಅನಿರುದ್ಧ ಅವರು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದಾರೆ. 

ಕಾವೇರಿ ನಿವಾಸದಲ್ಲಿ ಸಿಎಂ ಭೇಟಿಯಾಗಿ ಅನಿರುದ್ಧ ಮನವಿ ಸಲ್ಲಿಸಿದರು.

ಸಿಎಂ ಭೇಟಿ ಬಳಿಕ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿದೆ. ಹಿಂದೆಯೂ ಸಕಾರಾತ್ಮಕವಾಗಿ ಸ್ಪಂದಿಸಿದ್ದರು. ಇವತ್ತು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ವಿಚಾರವಾಗಿ ಸಚಿವ ಸಂಪುಟದಲ್ಲಿ ಚರ್ಚೆ ಮಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 


ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ಕೊಡಿ ಎಂದು ಕೇಳಿದ್ರೆ ತಪ್ಪಾಗುತ್ತದೆ. ಹಾಗಾಗಿ, ಕೇಳುವ ಬದಲಾಗಿ ನೆನಪು ಮಾಡುತ್ತೇನೆ. ಈ ಬಾರಿಯೂ ನೆನಪು ಮಾಡಿದ್ದೇನೆ‌‌ ಎಂದು ಹೇಳಿದರು.

ವಿಷ್ಣುವರ್ಧನ್ ಸಮಾಧಿ ಧ್ವಂಸ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದರ ಬಗ್ಗೆ ಈಗಾಗಲೇ ಸರ್ಕಾರದ ಮತ್ತು ಸಿಎಂ ಗಮನಕ್ಕಿದೆ. 

ಹಿಂದೆ ನಾವು ಕೇಳಿದ ಹಾಗೆ ಕರ್ನಾಟಕ ಸರ್ಕಾರ ಅಪ್ಪ ಅವರ ಸ್ಮಾರಕ ಮಾಡಿದ್ದಾರೆ. ಈಗಾಗಲೇ ಸರ್ಕಾರ ಐದು ಎಕರೆ ಜಮೀನಿನಲ್ಲಿ ಸ್ಮಾರಕ ಮಾಡಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ