ಬ್ರಾಹ್ಮಣರ ಬಗ್ಗೆ ಹೇಳಿಕೆ: ಪೊಲೀಸರಿಂದ ನಟ ಚೇತನ್ ವಿಚಾರಣೆ

ಗುರುವಾರ, 17 ಜೂನ್ 2021 (09:04 IST)
ಬೆಂಗಳೂರು: ಬ್ರಾಹ್ಮಣರು ಮತ್ತು ಬ್ರಾಹ್ಮಣ್ಯದ ಬಗ್ಗೆ ಅವಹೇಳನಕಾರಿ ಹೇಳಿಕೆ ಕೊಟ್ಟ ಆರೋಪದಲ್ಲಿ ಬಸವನಗುಡಿ ಪೊಲೀಸರು ನಟ ಚೇತನ್ ವಿಚಾರಣೆ ನಡೆಸಿದ್ದಾರೆ.


ಚೇತನ್ ವಿರುದ್ಧ ಬೆಂಗಳೂರಿನ ಬಸವನಗುಡಿ ಠಾಣೆಯಲ್ಲಿ ಬ್ರಾಹ್ಮಣ ಸಮುದಾಯದಿಂದ ದೂರು ದಾಖಲಾಗಿತ್ತು. ಈ ಸಂಬಂಧ ದೂರು ದಾಖಲಿಸಿಕೊಂಡ ಪೊಲೀಸರು ಚೇತನ್ ರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಚೇತನ್, ‘ಯಾರು ಏನೇ ಹೇಳಿದರೂ ನನ್ನ ಹೋರಾಟ ನಿಲ್ಲಲ್ಲ’ ಎಂದಿದ್ದಾರೆ. ಈ ವೇಳೆ ಪೊಲೀಸರು ಫೇಸ್ ಬುಕ್ ನಲ್ಲಿ ಚೇತನ್ ನೀಡಿದ್ದ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ