Actor Darshan: ಡೆವಿಲ್ ಸಿನಿಮಾದಿಂದ ಡಿ ಬಾಸ್ ಅಭಿಮಾನಿಗಳಿಗೆ ಸಿಕ್ತು ಗುಡ್ನ್ಯೂಸ್
ರೇಣುಕಾಸ್ವಾಮಿ ಕೊಲೆ ಪ್ರಕರಣದ ಷರತ್ತು ಬದ್ಧ ಜಾಮೀನು ಮೂಲಕ ಹೊರಬಂದಿರುವ ನಟ ದರ್ಶನ್ ಅವರು ಈಗಾಗಲೇ ಸಿನಿಮಾ ಶೂಟಿಂಗ್ನಲ್ಲಿ ತೊಡಗಿದ್ದಾರೆ.
ಸದ್ಯ ಪ್ಯಾಮಿಲಿ ಜತೆ ಸಮಯ ಕಳೆಯುತ್ತಿರುವ ದರ್ಶನ್ ಅವರು ತಮ್ಮ ಪಾರ್ಮ್ಹೌಸ್ನಲ್ಲಿ ಟೈಮ್ ಪಾಸ್ ಮಾಡುತ್ತಿದ್ದಾರೆ.
ಈಚೆಗೆ ವಿದೇಶಕ್ಕೆ ಪ್ರಯಾಣ ಬೆಳೆಸಲು ಅನುಮತಿ ಕೋರಿದ್ದರು. ಈ ಸಂಬಂದ ತೀರ್ಪು ಕಾಯ್ದಿರಿಸಿದ್ದ ಕೋರ್ಟ್ ಇದೀಗ ಷರತ್ತು ಬದ್ಧ ಅನುಮತಿಯನ್ನು ನೀಡಿದೆ. ಇದೇ ಖುಷಿಯಲ್ಲಿದ್ದ ದರ್ಶನ್ ಫ್ಯಾನ್ಸ್ಗೆ ಇದೀಗ ತಮ್ಮ ನೆಚ್ಚಿನ ನಟನ ಸಿನಿಮಾದ ಅಪ್ಡೇಟ್ ಸಿಕ್ಕಿರುವುದು ಅವರ ಖುಷಿಯನ್ನು ಇನ್ನಷ್ಟು ಹೆಚ್ಚಿಸಿದೆ.