ನಟ ವಿನೋದ್ ರಾಜ್‌ಗೆ ಅನಾರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Sampriya

ಬುಧವಾರ, 12 ಜೂನ್ 2024 (15:07 IST)
Photo Courtesy X
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ವಿನೋದ್ ರಾಜ್‌ ಅವರ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕರುಳಿನ ಸಮಸ್ಯೆಯಿಂದಾಗಿ ಅವರು ಆಸ್ಪತ್ರೆಗೆ ದಾಖಲಾಗಿದೆ ಎಂದು ತಿಳಿದುಬಂದಿದೆ.

ಕನ್ನಡದ ಮೇರುನಟಿ ಲೀಲಾವತಿ ಅವರ ಪುತ್ರನಾಗಿರುವ ವಿನೋದ್ ರಾಜ್ 11 ವರ್ಷಗಳ ಹಿಂದೆ ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ವೇಳೆ, ಅವರ ಹಾರ್ಟ್‌ಗೆ ಸ್ಟಂಟ್ ಅಳವಡಿಸಲಾಗಿತ್ತು.

ಇದೀಗ ಅದೇ ಸ್ಟಂಟ್‌ನಿಂದ ಕರುಳಿನ ಸಮಸ್ಯೆ ಎದುರಾಗಿದೆ. ಹಾಗಾಗಿ ಇದೀಗ ಆಪರೇಷನ್ ಕೂಡ ಮಾಡಲಾಗಿದ್ದು, ಇನ್ನೇರಡು ದಿನಗಲ್ಲಿ ವಿನೋದ್ ರಾಜ್ ಡಿಸ್ಚಾರ್ಜ್ ಕೂಡ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವಿನೋದ್ ರಾಜ್ ಕನ್ನಡದ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಡ್ಯಾನ್ಸ್ ರಾಜಾ ಡ್ಯಾನ್ಸ್, ಶ್ರೀ ವೆಂಕಟೇಶ್ವರ ಮಹಿಮೆ, ಕೃಷ್ಣಾ ನೀ ಕುಣಿದಾಗ, ಕಾಲೇಜ್ ಹೀರೋ, ನನಗು ಹೆಂಡ್ತಿ ಬೇಕು, ಯುದ್ಧ ಪರ್ವ, ನಾಯಕ, ಬನ್ನಿ ಒಂದ್ಸಲಾ ನೋಡಿ, ಗಿಳಿ ಬೇಟೆ ಎಂಬ ಸಿನಿಮಾಗಳಲ್ಲಿ ನಟಿಸಿದ್ದಾರೆ.

ನೆಲಮಂಗಲದಲ್ಲಿ ಕೃಷಿ ಮಾಡುತ್ತಿರುವ ವಿನೋದ್‌ ರಾಜ್‌ ಅವರ ತಾಯಿ ಲೀಲಾವತಿ ಕಳೆದ ಡಿಸೆಂಬರ್‌ನಲ್ಲಿ ನಿಧನರಾಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ